ಅನಾರೋಗ್ಯದ ನಡುವೆಯೂ ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯಕ್ಕೆ ಪಾದಾರ್ಪಣೆ ಮಾಡುವುದು ಪಕ್ಕಾ ಅದಂತಾಗಿದೆ.
ಈ ಡಿಸೆಂಬರ್ ಅಂತ್ಯದೊಳಗೆ ತಾವೇ ಒಂದು ಪಾರ್ಟಿ ಕಟ್ಟಿ ಹೆಸರು ಘೋಷಣೆ ಮಾಡಲು ರಜನಿ ಸಜ್ಜಾಗಿದ್ದಾರೆ. ಆ ಮೂಲಕ ರಜನಿಕಾಂತ್ ರಾಜಕೀಯಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡಲು ನಿಶ್ಚಯ ಮಾಡಿದಂತಾಗಿದೆ.
ರಜನಿಕಾಂತ್ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನುವುದು ವದಂತಿ ಆದಂತಾಗಿದೆ. ಏಕೆಂದರೆ ರಜನೀಯೇ ಒಂದು ಸ್ವಂತ ಪಕ್ಷ ಘೋಷಣೆಗೆ ಅಣಿಯಾಗಿದ್ದಾರೆ .
ಡಿಸೆಂಬರ್ 31 ಕ್ಕೆ ರಜನಿಕಾಂತ್ ಅಧಿಕೃತವಾಗಿ ಹೊಸ ಪಕ್ಷ ಘೋಷಣೆ ಮಾಡಲು ಮೂಹೂರ್ತ ನಿಗದಿಯಾಗಿದೆ. 2021 ರಲ್ಲಿ ತಮಿಳುನಾಡಿನಲ್ಲಿ ವಿಧಾನ ಸಭೆ ಚುನಾವಣೆಯಲ್ಲಿ ರಜನಿಕಾಂತ್ ಸ್ಪರ್ಧೆ ಮಾಡಲಿದ್ದಾರೆ ಎನ್ನುವುದು ದಿಟವಾಗಿದೆ.
ತಮಿಳುನಾಡಿನಲ್ಲಿ ಎಐಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದು ನಿಶ್ಚಿತ. ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವುದು ಇನ್ನೂ ಅಡ್ಡಗೋಡೆ ಮೇಲೆ ದೀಪ ಇಟ್ಟ ಹಾಗಿದೆ.
ಹಿರಿಯ ರಾಜಕಾರಣದಲ್ಲಿ ವೈಕೋ ಮತ್ತು ವಿಜಯಕಾಂತ್ ಸ್ವಂತ ಪಕ್ಷದಿಂದ ಚುನಾವಣೆ ಎದುರಿಸಲಿದ್ದಾರೆ. ಈ ನಡುವೆ ರಜನಿಕಾಂತ್ ಸ್ಪರ್ಧೆ, ಆವರ ಪಕ್ಷದ ಹೋರಾಟ ಕೂಡ ಕುತೂಹಲ ಮೂಡಿಸಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ