ಗ್ರೇಟರ್ ಹೈದರಾಬಾದ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಮ್ಯಾಜಿಕ್ ಮಾಡಿದೆ.
ಕಳೆದ ಬಾರಿ ಕೇವಲ 4 ಸೀಟ್ ಗಳನ್ನು ಮಾತ್ರ ಗೆದ್ದಿದ್ದ ಬಿಜೆಪಿ ಈ ಬಾರಿ 36 ಸೀಟುಗಳನ್ನು ಗೆಲ್ಲುವ ಮೂಲಕ 8 ಪಟ್ಟು ಸಂಖ್ಯೆ ಹೆಚ್ಚಿಸಿ ಕೊಂಡಿದೆ.
ಆಡಳಿತರೂಢ ಟಿಆರ್ ಎಸ್ ಕಳೆದ ಬಾರಿ 90 ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಟಿಆರ್ ಎಸ್ 72 ಸ್ಥಾನಗಳಲ್ಲಿ ಮಾತ್ರ ಜಯ ಸಾಧಿಸಿದೆ.
ಓವೈಸಿಯ ಎಂಐಎಂ 42 ಸ್ಥಾನ ಗಳಿಸಿದೆ. ಕಾಂಗ್ರೆಸ್ ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ತೀವ್ರ ಮುಖಭಂಗ ಅನುಭವಿಸಿದೆ.

ಬಿಜೆಪಿ ಗೆ ಭಾಗ್ಯ ತಂದು ಕೊಟ್ಟ ಭಾಗ್ಯನಗರ :
ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಅನ್ನು ಭಾಗ್ಯನಗರ ಎಂಬ ಹೆಸರನ್ನು ಮರು ನಾಮಕರಣ ಮಾಡುವುದಾಗಿ ಹೇಳಿ ಬಿಜೆಪಿ ಹಿಂದೂಗಳ ಮತಗಳನ್ನು ಬಾಚಿ ಕೊಂಡಿದೆ.
ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಬಾರದೆ ಅತಂತ್ರವಾಗಿದೆ. ಬಿಜೆಪಿ ಯಾರ ಜೊತೆ ಸೇರಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಎಂಬುದು ಕುತೂಹಲ ಮೂಡಿಸಿದೆ.
ಕಸರತ್ತು ಮಾಡಿಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಭಾಗ್ಯನಗರ ಎಂಬ ಹೆಸರನ್ನು ಮರು ನಾಮಕರಣ ಮಾಡುವುದೇ ಅಥವಾ ಚುನಾವಣೆಯ ರಾಜಕೀಯ ಲಾಭಕ್ಕಾಗಿ ಹೀಗೆ ಹೇಳಿತೋ ಎಂಬ ಅಂಶ ನಿಗೂಢವಾಗಿದೆ.
ಜಿದ್ದಾಜಿದ್ದಿಯಾಗಿ ನಡೆದ ಈ ಚುನಾವಣೆ ಮುಂದಿನ ವಿಧಾನ ಸಭಾ ಚುನಾವಣೆಯ ದಿಕ್ಸೂಚಿ ಎಂದು ಲೆಕ್ಕಾಚಾರ ಹಾಕಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ