ಸುಳ್ಳು ಹೇಳುವುದರಲ್ಲಿ ಈ ಕುಮಾರಸ್ವಾಮಿ ನಿಸ್ಸೀಮ ಕಣ್ರಿ. ಅಪ್ಪ- ಮಗ ಕಣ್ಣೀರು ಹಾಕಿಕೊಂಡೇ ಬಂದ್ರು. ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತು ಆಡಳಿತ ಮಾಡಿದ ಕೀರ್ತಿ ಇವರಿಗೆ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ಮಾಡಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಮಾಡಿದ ಎಲ್ಲಾ ಆರೋಪಗಳಿಗೆ ಪ್ರತಿಕ್ರಿಯೆ ನೀಡಿ, ದೇವೇಗೌಡ, ಕುಮಾರಸ್ವಾಮಿಗೆ ಕಣ್ಣೀರು ಹಾಕುವುದೇ ಒಂದು ಸಂಸ್ಕೃತಿ ಇಂತಹವರು ಕಾಂಗ್ರೆಸ್ ನಂಬಿ ಮೋಸ ಹೋದ್ರಾ ಇವರು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಾಜ್ ವೆಸ್ಟ್ಂಡ್ ಹೋಟೆಲ್ ನಲ್ಲಿ ಕುಳಿತು ಆಡಳಿತ ಮಾಡಿದರು. ನಮ್ಮ ಶಾಸಕರ ಕೈ ಗೆ ಸಿಗುತ್ತಿರಲಿಲ್ಲ. ಶಾಸಕರ ಕಷ್ಟ ಸುಖ ವಿಚಾರಿಸಲಿಲ್ಲ. ಅದ್ಕೆ ಸರ್ಕಾರ ಬಿದ್ದು ಹೋಯಿತು ಎಂದು ಹೇಳಿದರು.
ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ. ಬೇಜವಾಬ್ದಾರಿ ಮನುಷ್ಯ. ಹಿಟ್ ಆ್ಯಂಡ್ ರನ್ ಮನುಷ್ಯ. ನಾವು ಜಾತ್ಯಾತೀತ ಪಕ್ಷ ಎಂದು ತಿಳಿದು ಸರ್ಪೋಟ್ ಮಾಡಿದೆವು. ಯಾರನ್ನೂ ನಾವು ಟ್ರ್ಯಾಪ್ ಮಾಡಿಲ್ಲ. ಈಗ ಗ್ರಾಪಂ ಚುನಾವಣಾ ಬಂದಿದೆ. ಅದ್ಕೆ ಈ ರೀತಿಯಲ್ಲಿ ಹೇಳಿ ಬಿಜೆಪಿಯಿಂದ ಸಿಂಪಥಿ ಸೃಷ್ಟಿ ಮಾಡುತ್ತಿದ್ದಾರೆ ಎಂದು ಸಿದ್ದು ದೂರಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ