ತಲಕಾಡು ಪಂಚಲಿಂಗ ದರ್ಶನ ಈ ಬಾರಿ ಡಿ.10ರಿಂದ 19ರವರೆಗೆ ಭಕ್ತರಿಗೆ ಅವಕಾಶ ಸಿಗಲಿದೆ.
ಪಂಚಲಿಂಗ ದರ್ಶನಕ್ಕೆ ದಸರಾದಲ್ಲಿ ಉಳಿದ ಅನುದಾನವನ್ನು ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಪಂಚಲಿಂಗ ದರ್ಶನಕ್ಕೆ ದಸರಾದಲ್ಲಿ ಉಳಿದಿರುವ 7.8 ಕೋಟಿ ರೂ. ಅನುದಾನದಲ್ಲಿ ಪಂಚಲಿಂಗ ದರ್ಶನಕ್ಕೆ ಬೇಕಾಗುವಷ್ಟು ಅನುದಾನ ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ಉಳಿದಂತೆ ಡಿ.10ರಿಂದ 19ರವರೆಗೆ ನಡೆಯಲಿರುವ ದರ್ಶನಕ್ಕೆ ಎಲ್ಲಾ ಸಿದ್ಧತೆ ಆಗುತ್ತಿದೆ. ಡಿ.14ರಂದು ವಿಶೇಷ ಮಹೋತ್ಸವ ಕಾರ್ಯಕ್ರಮವಿದೆ.
ಡಿ.13ರಂದು ರಾತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಸ್ತವ್ಯ ಮಾಡಿ, ಡಿ.14ರ ಮುಂಜಾನೆ ಪಂಚಲಿಂಗ ದರ್ಶನದ ವಿಶೇಷ ಪೂಜೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
1 ಸಾವಿರ ಜನಕ್ಕೆ ಸೀಮಿತ?
ಈ ಬಾರಿಯ ಪಂಚಲಿಂಗ ದರ್ಶನಕ್ಕೆ ಒಂದು ಸಾವಿರ ಜನಕ್ಕೆ ಸೀಮಿತವಾಗಿ ಪಂಚಲಿಂಗ ದರ್ಶನ ಭಾಗ್ಯ ಸಿಗಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸಲಹೆ ನೀಡುವಂತೆ ಪರಿಣತರ ಸಮಿತಿಗೆ ವರದಿ ಕೇಳಲಾಗಿತ್ತು. ಆ ವರದಿಯಂತೆ ಪ್ರತಿ ದಿನ 1000 ಜನರಿಗೆ ಹಾಗೂ ಡಿ.14ರಂದು 1500 ಜನರಿಗೆ ಅವಕಾಶ ನೀಡುವಂತೆ ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ತಲಕಾಡಿನ ಜನರು ಹಾಗೂ ಆ ತಾಲ್ಲೂಕಿನ ಜನರಿಗೆ ಮಾತ್ರ ಅವಕಾಶ ನೀಡಿ, ಹೊರಗಿನವರಿಗೆ ಅವಕಾಶ ನೀಡದಂತೆ ಪರಿಣತರ ಸಮಿತಿ ಸಲಹೆ ಮಾಡಿದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ