ಕೇಂದ್ರ ಸರ್ಕಾರ ಅನುಮೋದಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದ ಸಾಂಸ್ಕೃತಿಕ ಅವಶ್ಯಕತೆಗಳಿಗೆ ಒಗ್ಗೂಡುವ ರೀತಿಯಲ್ಲಿ ತಯಾರಿಸಲಾದ ರಾಜ್ಯದ ಕಾರ್ಯಪಡೆ ಸಲ್ಲಿಸಿರುವ ವರದಿಗೆ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ.
ಈ ನಿರ್ಧಾರ ದಿಂದಾಗಿ ಶಾಲಾ ಶಿಕ್ಷಣದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಪುಟ ಅನುಮೋದನೆ ನೀಡಿದ ನಂತರ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಸಚಿವರು, ಕರ್ನಾಟಕ ಶಿಕ್ಷಣ ಆಯೋಗ ಸ್ಥಾಪನೆ ಸೇರಿದಂತೆ ಶಾಲಾ ಆಡಳಿತ, ನಿಯಂತ್ರಣ ನಿರ್ಣಯಗಳನ್ನು ತೆಗೆದುಕೊಳ್ಳುವಿಕೆ ಮತ್ತು ಶೈಕ್ಷಣಿಕ ಆಯಾಮಗಳ ಕುರಿತು ಮೌಲ್ಯಮಾಪನಗಳಿಗಾಗಿ ಸ್ವತಂತ್ರ ಸಂಸ್ಥೆಗಳನ್ನು ಸ್ಥಾಪನೆ ಸೇರಿದಂತೆ ಹಲವು ವೈಶಿಷ್ಟ್ಯಗಳ ಹಿನ್ನೆಲೆಯಲ್ಲಿ ಮಂದಿನ ದಿನಗಳಲ್ಲಿ ಶಾಲಾ ಶಿಕ್ಷಣದ ಚಿತ್ರಣವನ್ನೇ ಸಂಪೂರ್ಣವಾಗಿ ಪರಿವರ್ತಿಸಲಿದೆ. ಶಾಲಾಡಳಿತ ಮತ್ತು ಶೈಕ್ಷಣಿಕ ಆಯಾಮಗಳಲ್ಲಿ ಹೊಸ ಮನ್ವಂತರಕ್ಕೆ ಕಾರಣವಾಗಲಿದೆ ಎಂದಿದ್ದಾರೆ.
ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಶಿಕ್ಷಣ ಕೌನ್ಸಿಲ್ (ಕೆಎಸ್ಇಸಿ) ಮತ್ತು ಸ್ಟೇಟ್ ಸ್ಕೂಲ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (ಎಸ್ಎಸ್ಎಸ್ಎ) ಸ್ಥಾಪನೆ, ಡಿಎಸ್ಇಆರ್ ಟಿ ಪುನರ್ವಿನ್ಯಾಸ, ಆದರ್ಶ, ಮೊರಾರ್ಜಿ, ಕೆಜಿಬಿವಿ, ಕೆಪಿಎಸ್ ಮುಂತಾದ ಶಾಲಾ ಮಾದರಿಗಳನ್ನು ಶಾಲಾ ಸಂಕೀರ್ಣಗಳಾಗಿ ಬದಲಾವಣೆ, ವಿಶೇಷ ಶೈಕ್ಷಣಿಕ ವಲಯಗಳ –ಎಸ್ ಇ ಝಡ್ ಸ್ಥಾಪನೆ, ದಿವ್ಯಾಂಗ ವಿದ್ಯಾರ್ಥಿ ವೇತನ, ಶಿಕ್ಷಕರ ನೇಮಕಾತಿ, ಸೇವಾ ನಿಯಮಗಳು ಮತ್ತು ವೃತ್ತಿ ಪ್ರಗತಿಗಾಗಿ ಸೇವಾ ನಿಯಮಗಳ ಬದಲಾವಣೆ, ಗುರುಚೇತನ ಮಾದರಿಯನ್ನು ನಿರಂತರ ವೃತ್ತಿ ಅಭಿವೃದ್ಧಿಗಾಗಿ ವೇದಿಕೆಯನ್ನಾಗಿ ಬಳಸಿಕೊಳ್ಳವುದು ಸೇರಿದಂತೆ ಹಲವಾರು ಮಾರ್ಪಾಡುಗಳನ್ನು ಮಾಡಲು ಸಂಪುಟ ಅನುಮೋದನೆ ನೀಡಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ