ವೃಕ್ಷಮಾತೆ ಸಾಲು ಮರದ ತಿಮ್ಮಕ್ಕನಿಗೆ ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ.
ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆಗೆ ಸಕಲ ಸಿದ್ದತೆ ಮಾಡಲಾಗಿದೆ.
ಏನಾಗಿತ್ತು ತಿಮ್ಮಕ್ಕ ನಿಗೆ?
ವೃಕ್ಷ ಮಾತೆ ಡಾ. ಸಾಲುಮರದ ತಿಮ್ಮಕ್ಕ ಭಾನುವಾರ ಸಂಜೆ 4 ಗಂಟೆಯಲ್ಲಿ ಆಕಸ್ಮಿಕವಾಗಿ ಬಿದ್ದ ಕಾರಣ ಸೊಂಟದ ಮೂಳೆ ಸ್ವಲ್ಪ ವ್ಯತ್ಯಾಸವಾಗಿದೆ.
ಈ ಕಾರಣಕ್ಕಾಗಿ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಊನಗೊಂಡ ಭಾಗವನ್ನು ಸರಿ ಮಾಡಲು ವೈದ್ಯರು ಪ್ರಯತ್ನ ಮಾಡುತ್ತಾರೆ.
ರಾಜ್ಯದ ಬಹು ದೊಡ್ಡ ಆಸ್ತಿ ಆಗಿರುವ ತಿಮ್ಮಕ್ಕ ಅವರು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆ ಯಿಂದ ಬಿಡುಗಡೆ ಆಗಲಿ ಎಂದು ಅಭಿಮಾನಿಗಳ ಬಳಗ ದೇವರಲ್ಲಿ ಪ್ರಾರ್ಥಿಸಿದೆ.