ಬೆಂಗಳೂರಿನ ಕೋರಮಂಗಲದ ಆರ್ ಟಿ ಒ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಹಣದ ಮಳೆ ಸುರಿದಿದೆ.
ಈ ವೇಳೆ ಕಿಟಕಿಗಳಿಂದ ಹೊರ ಹಾಕಿದ ಹಣವನ್ನು ಕೆಳಗಿದ್ದ ಅಂಗಡಿ ಹಾಗೂ ಫುಟ್ ಪಾತ್ ನಲ್ಲಿ ನಿಂತಿದ್ದ ಜನರು ಆಯ್ಕೆ ಮಾಡಿಕೊಂಡು ಧನ್ಯವಾದರು.
ಎಸಿಬಿ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಕಚೇರಿಯಲ್ಲಿದ್ದಂತಹ ಸಿಬ್ಬಂದಿಗಳು ಕಿಟಕಿಯ ಮೂಲಕ ಹಣ ಹೊರ ಎಸೆದಿದ್ದಾರೆ.
ಸಿಬ್ಬಂದಿಗಳು ಹೀಗೆ ಎಸೆದಿದ್ದೇ ತಡ, ಕಿಟಕಿಯಿಂದ ಬಿದ್ದ ಹಣವನ್ನು ನಾ ಮುಂದು, ತಾ ಮುಂದೆ ಅಂತ ಜನರು ಬಾಚಿಕೊಂಡಿದ್ದಾರೆ.
ಕೋರಮಂಗಲದ ಆರ್ ಟಿ ಒ ಕಚೇರಿಯಲ್ಲಿ ವಾಹನ ನೊಂದಣಿ, ಚಾಲನಾ ಪರವಾನಗಿ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಎಸಿಬಿಗೆ ದೂರುಗಳು ಬಂದಿದ್ದವು.
ಬೆಂಗಳೂರು ವಿಭಾಗದ ಎಸ್ ಪಿ ಕುಲದೀಪ್ ಆರ್ ಜೈನ್ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡ, ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದರು.
5 ಲಕ್ಷ ನಗದು ವಶ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ದಾಳಿ ಮಾಡಿ ಕೈಗೆ 5.96 ಲಕ್ಷ ನಗದು ಹಣ ಸಿಕ್ಕಿದ್ದು ವಶಪಡಿಸಿಕೊಂಡಿದ್ದಾರೆ.ದಾಖಲೆಗಳ ಕೊಠಡಿ, ಅಧಿಕಾರಿಗಳ ಕೊಠಡಿ, ಕಚೇರಿ ಪಕ್ಕದ ಖಾಸಗಿ ಅಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಲಂಚದ ಹಣವನ್ನು ಬಚ್ಚಿಟ್ಟಿರುವುದನ್ನು ತನಿಖಾ ತಂಡ ಪತ್ತೆಮಾಡಿದೆ.
ಆರ್ಟಿಒ ಕಚೇರಿಯ ಒಳಗಡೆ ಇದ್ದ ನಾಲ್ವರು ಖಾಸಗಿ ಮಧ್ಯವರ್ತಿಗಳು ಹಾಗೂ ಅಕ್ರಮದಲ್ಲಿ ಶಾಮೀಲಾದ ಶಂಕೆ ಇರುವ ಇಬ್ಬರು ಅಧಿಕಾರಿಗಳನ್ನು ಎಸಿಬಿ ತಂಡ ವಶಕ್ಕೆ ಪಡೆದು, ವಿಚಾರಣೆ ನಡೆಯುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ