February 21, 2026

Newsnap Kannada

The World at your finger tips!

vatal

ಜ. 9 ರಂದು ರಾಜ್ಯದಲ್ಲಿ ರೈಲು ತಡೆ ವಾಟಾಳ್ ಕರೆ

Spread the love

ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಜನವರಿ 9ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ಚಾಮರಾಜನಗರದ ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವೇಳೆ ವಾಟಾಳ್ ನಾಗರಾಜ್
ಜ.9 ರಂದು ರಾಜ್ಯಾದ್ಯಂತ ರೈಲು ತಡೆ ನಡೆಸುವುದಾಗಿ ಹೇಳಿದರು.

ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರೈಲು ಹಳಿಗಳ ಮೇಲೆ ಸತ್ಯಾಗ್ರಹ ಕೂರಿಸ್ತಿವಿ. ಜನಗಳ ಮೇಲೆ ರೈಲು ಬಿಡಬೇಕು ಹೊರತು, ರೈಲು ಹೋಗಲೂ ಸಾಧ್ಯವಿಲ್ಲ. ಬೀದರ್ ನಿಂದ ಚಾಮರಾಜನಗರದವರೆಗೆ, ಮಂಗಳೂರಿನಿಂದ ಕೋಲಾರದವರೆಗೆ ರೈಲು ನಿಲ್ದಾಣ ಸೇರಿದಂತೆ ಹಳಿಗಳ ಮೇಲೆ ಕುಳಿತು ಹೋರಾಟ ಮಾಡ್ತೀವಿ. ಎರಡು ಸಾವಿರ ಸಂಘಟನೆಯಿಂದ ರೈಲು ತಡೆಗೆ ಬೆಂಬಲ ಸಿಕ್ಕಿದ್ದು, ಅಂದು ಯಾರೂ ಕೂಡ ಸಾರ್ವಜನಿಕರು ರೈಲಿನಲ್ಲಿ ಪ್ರಯಾಣಿಸಬೇಡಿ. ನಿಲ್ದಾಣಕ್ಕೆ ಬರಬೇಡಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.

error: Content is protected !!