ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಸಮಿತಿಯೊಂದನ್ನು ನೇಮಕ ಮಾಡಿದೆ.
ರಾಜ್ಯದ ನಾಲ್ಕು ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಹಾಗೂ 6 ನೇ ವೇತನ ಆಯೋಗ ಶಿಫಾರಸುಗಳನ್ನು ಜಾರಿ ಮಾಡುವುದನ್ನು ಹೊರತುಪಡಿಸಿ ಉಳಿದ ಬೇಡಿಕೆಗಳ ಸಮಗ್ರ ಪ್ರಸ್ತಾವನೆಯನ್ನು ಸಲ್ಲಿಸಲು ಸಮಿತಿಗೆ ಹೇಳಿದೆ.
ಕೆಎಸ್ ಆರ್ ಟಿಸಿ ಎಂಡಿ ಅವರಿಗೆ ಶೀಘ್ರದಲ್ಲೇ ಈ ಪ್ರಸ್ತಾವನೆಯನ್ನು ಸಲ್ಲಿಸುವ ಜವಾಬ್ದಾರಿ ನೀಡಲಾಗಿದೆ.
ನೌಕರರ ವಿರುದ್ಧ ಕ್ರಮ?
ಈ ನಡುವೆ ನಾಲ್ಕು ದಿನಗಳ ಕಾಲ ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ದ ಕ್ರಮ ಜರುಗಿಸುವ ಚಿಂತನೆ ನಡೆದಿದೆ. ಅದರಲ್ಲಿ ಈ ನಾಲ್ಕು ದಿನದ ವೇತನ ಕಡಿತಗೊಳಿಸುವ ಬಗ್ಗೆಯೂ ಸಾರಿಗೆ ಇಲಾಖೆ ಆಲೋಚನೆ ಮಾಡುತ್ತಿದೆ ಎಂದು ಹೇಳಲಾಗಿದೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ