ಕೇಂದ್ರದ ಮಾಜಿ ಮಂತ್ರಿ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಪಕ್ಕಾ ಆಗಿದೆ.ಕಾಂಗ್ರೆಸ್ ಗೆ ವಿದಾಯ ಹೇಳಲು ದಿನಗಣನೆ ಆರಂಭವಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಇಬ್ರಾಹಿಂ ಈಗಾಗಲೇ ಕಾಂಗ್ರೆಸ್ನಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದಾರೆ. ಬಹುತೇಕ ಅವರು ಪಕ್ಷದಿಂದ ಒಂದು ಕಾಲು ಆಚೆ ಇಟ್ಟು ಜೆಡಿಎಸ್ ನತ್ತ ಹೆಜ್ಜೆ ಇಟ್ಟಿದ್ದಾರೆ.
ಈಗಾಗಲೇ ಎಚ್ಡಿ ಕುಮಾರಸ್ವಾಮಿ ಖುದ್ದು ಇಬ್ರಾಹಿಂ ನಿವಾಸಕ್ಕೆ ಹೋಗಿ ಜೊತೆ ಮಾತನಾಡಿದ್ದಾರೆ. ಅಲ್ಲದೇ ಸ್ವತಃ ಸಿ.ಎಂ. ಇಬ್ರಾಹಿಂ ದೇವೇಗೌಡ ಅವರನ್ನು ಭೇಟಿಯಾಗಿ ಅಂತಿಮ ಮಾತುಕತೆ ಮುಗಿಸಿದ್ದಾರೆ. ಶೀಘ್ರದಲ್ಲಿಯೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಲಿದೆ ಎಂಬ ವರ್ತಮಾನ ಖಚಿತವಾಗಿದೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಇಬ್ರಾಹಿಂ
ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ.
ಬೆಳಗಾವಿಯಲ್ಲಿ ಹಳಬರು, ಹೊಸಬರ ಪರಿಚಯ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷವನ್ನು ಬಲವಾಗಿ ಕಟ್ಟಿದರೆ ಮಾತ್ರ ರಾಜ್ಯಕ್ಕೆ ಉಳಿಗಾಲವಿದೆ ಎಂದರು.
ಕಾಂಗ್ರೆಸ್ ಪಕ್ಷ ನಿರ್ಲಕ್ಷ್ಯ ಮಾಡಿದೆ. ಆದರೆ ಸಿದ್ದರಾಮಯ್ಯ ನ ಬಗ್ಗೆ ನಾನು ಮಾತನಾಡುವುದಿಲ್ಲ. ಮನೆ ಕಟ್ಟಿದ್ದೇವೆ. ಈಗ ತಾಂಬೂಲ ಕೊಟ್ಟಿದ್ದಾರೆ ನಾನು ಮುಂದೆ ಸಾಗುತ್ತೇನೆ ಎಂದು ಮಾರ್ಮಿಕವಾಗಿ ಕಾಂಗ್ರೆಸ್ ಬಿಡುವ ಸುಳಿವು ಕೊಟ್ಟರು ಇಬ್ರಾಹಿಂ.
ನಾನು ಯಾವ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ. ನಮ್ಮದು ಬಸವ ಕೃಪಾ, ಅವರದ್ದು ಕೇಶವ ಕೃಪಾ. ನಮಗೂ ಅವರಿಗೂ ( ಬಿಜೆಪಿ) ಹೊಂದಿಕೆ ಆಗುವುದಿಲ್ಲ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ