- ಹೊಸ ಬಗೆಯ ಕೊರೋನಾ ಬಗ್ಗೆ ಐಸಿಎಂಆರ್ ಮಾಹಿತಿ ನೀಡಲಿದೆ
ಹೊಸ ರೂಪಾಂತರ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ರೂಪಿಸಬೇಕಿದೆ. ಇದಕ್ಕಾಗಿ ಗೃಹ ಇಲಾಖೆಯ ಜೊತೆ ಸಭೆ ನಡೆಸಿ ಹೊಸ ಬಗೆಯ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸಲಾಗುವುದು ಎಂದರು.
ಮೂರನೇ ಹಂತದ ಪ್ರಯೋಗ:
ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಈ ಲಸಿಕೆಯನ್ನು ಪ್ರಾಯೋಗಿಕವಾಗಿ ಪಡೆಯಬಹುದು. ಕೊರೊನಾ ವಾರಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಈ ಲಸಿಕೆಯನ್ನು ಪಡೆದು ಪ್ರಯೋಗದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದ್ದೇನೆ. ಕ್ಲಿನಿಕಲ್ ಟ್ರಯಲ್ ನಲ್ಲಿ ಪಾಲ್ಗೊಂಡು ಸಹಾಯ ಮಾಡಬಹುದು ಎಂದರು.
ಯು ಕೆ ಯಿಂದ ಬಂದ 14 ಮಂದಿಗೆ ಪಾಸಿಟಿವ್:
ಯು.ಕೆ.ಯಿಂದ ಬಂದ 2,500 ಜನ ಪೈಕಿ, 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 14 ಜನರಿಗೆ ಪಾಸಿಟಿವ್ ಬಂದಿದೆ. ಇವರ ಮಾದರಿಯನ್ನು ನಿಮ್ಹಾನ್ಸ್ ನ ಲ್ಯಾಬ್ ಗೆ ಕಳುಹಿಸಲಾಗಿದೆ. ಈ ಮಾದರಿಗಳನ್ನು ಜೆನೆಟಿಕ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ಇದಕ್ಕೆ 48 ಗಂಟೆಗಳ ಕಾಲ ಬೇಕಾಗುತ್ತದೆ. ವರದಿ ಬಂದ ಬಳಿಕ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಇಡೀ ದೇಶದಲ್ಲಿ ಯು.ಕೆ.ಯಿಂದ ಒಟ್ಟು 38,500 ಜನರು ಬಂದಿದ್ದಾರೆ. ಎಲ್ಲ ರಾಜ್ಯಗಳಿಂದ ಬಂದ ಮಾದರಿ, ವರದಿಯನ್ನು ಕಲೆಹಾಕಿ ಅಂತಿಮ ವರದಿಯನ್ನು ಐಸಿಎಂಆರ್ ಪ್ರಕಟಿಸಲಿದೆ ಎಂದು ಮಾಹಿತಿ ನೀಡಿದರು.
ವಿಮಾನ ನಿಲ್ದಾಣದಲ್ಲಿ ಸೂಕ್ತ ತಪಾಸಣೆ ವ್ಯವಸ್ಥೆ ಇದೆ. ನೆಗೆಟಿವ್ ವರದಿ ಇಲ್ಲದವರನ್ನೂ ನಿಲ್ದಾಣದಲ್ಲೇ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ