February 22, 2026

Newsnap Kannada

The World at your finger tips!

prabhu chauhan

ಸುಗ್ರೀವಾಜ್ಙೆ ಮೂಲಕ ಗೋ ಹತ್ಯೆ ನಿಷೇಧ ಜಾರಿ – ಸಚಿವ ಪ್ರಭ್ ಚೌಹಾಣ್

Spread the love

ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ

ಸಚಿವ ಸಂಪುಟ ಸಭೆ ಬಳಿಕ ಸಚಿವ ಪ್ರಭು ಚೌಹಾಣ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ವಿಧಾನಸಭೆಯಲ್ಲಿ ಅಂಗೀಕಾರವಾಗಿ ಪರಿಷತ್ ನಲ್ಲಿ ಅವಕಾಶ ಸಿಗದ ಕಾರಣ ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.‌ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯ ವಾಗಿ ಕಡಿಮೆ ಆಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷ ಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ ಎಂದು ಹೇಳಿದರು.

error: Content is protected !!