ಮಂಡ್ಯ ಜಿಲ್ಲೆಯ ಬಲಮುರಿ, ಎಡಮುರಿ , ಮುತ್ತತ್ತಿ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಎರಡು ದಿನಗಳ ನಿಷೇದಾಜ್ಙೆ ಜಾರಿ ಮಾಡಲಾಗಿದೆ.
ಈ ಕುರಿತಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿರುವ ಜಿಲ್ಲಾಡಳಿತ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪ್ರವೇಶ ಕ್ಕೆ ನಿರ್ಬಂಧ ಹೇರಿ , ಡಿ. 31 ಹಾಗೂ ಜ. 1 ರಂದು ಆ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಎಡಮುರಿ, ಬಲಮುರಿ , ಕೆ ಆರ್ ಎಸ್ ನ ಹಿನ್ನೀರಿ ಪ್ರದೇಶ , ಮಳವಳ್ಳಿ ತಾಲೂಕಿನ ಮುತ್ತತ್ತಿ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಎರಡು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ವರ್ಷಾಚರಣೆಗೆ ಬ್ರೇಕ್ ಹಾಕಿ, ಸಂಭ್ರಮ ಕ್ಕೆ ಕಡಿವಾಣ ಹಾಕುವ ಮೂಲಕ ಕೊರೋನಾ ಸೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ