ಅತೀ ವೇಗದಿಂದ ಬೈಕ್ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ
ಆಯತಪ್ಪಿ ಮಂಡ್ಯದ ಯುವ ಪ್ರೇಮಿಗಳ ದುರಂತ ಸಾವು ಕಂಡ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹಾಗೂ ಮಧುವನಹಳ್ಳಿ ಮುಖ್ಯರಸ್ತೆಯಲ್ಲಿ ಜರುಗಿದೆ.
ಮಂಡ್ಯ ಜಿಲ್ಲೆಯ ಹರುವು ಗ್ರಾಮದ ಐಶ್ವರ್ಯ (18) ಹಾಗೂ ಆನಂದ್ (22) ಮೃತಪಟ್ಟ ಪ್ರೇಮಿಗಳು.
ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಪೂಜೆ ಮುಗಿಸಿ ಮಂಡ್ಯಕ್ಕೆ ವಾಪಸ್ಸು ಆಗುತ್ತಿದ್ದಾಗ ಅತೀ ವೇಗವಾಗಿ ಬೈಕ್ ಚಾಲನೆ ಮಾಡಿದ್ದರಿಂದ ಆಯಾತಪ್ಪಿ ರಸ್ತೆ ಬದಿಯ ಚಾನಲ್ಗೆ ಬಿದ್ದು ಭೀಕರವಾಗಿ ಗಾಯಗೊಂಡಿದ್ದರು.
ತಕ್ಷಣ ಸಾರ್ವಜನಿಕರು ಗಾಯಾಳು ಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು. ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಸೇರಿದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿ ಯಾಗದೇ ಕೊನೆಯುಸಿರೆಳಿದ್ದಾನೆ.
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ನಾಗರಾಜು, ಸಿಪಿಐ ಶ್ರೀಕಾಂತ್ ಹಾಗೂ ಎಸ್ ಐ ಅಶೋಕ್ ಭೇಟಿ ನೀಡಿ ಪರೀಶಿಲಿಸಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ