ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಈ ಅಪಘಾತದಲ್ಲಿ ಅಜರುದ್ದೀನ್ ಅವರಿಗೆ ಯಾವುದೇ ಗಾಯಗಳಾಗಿಲ್ಲ.
ಲಾಲ್ಸೋಟ್ ಕೋಟಾ ಹೈವೇಯಲ್ಲಿ ಅಪಘಾತ ಸಂಭವಿಸಿದೆ. ಅಜರ್ ರಣಥಂಬೋರ್ಗೆ ತಮ್ಮ ಕುಟುಂಬದೊಂದಿಗೆ ಆಗಮಿಸುತ್ತಿದ್ದಾಗ ಅಪಘಾತ ನಡೆದಿದೆ ಎಂದು ಆಪ್ತ ಸಹಾಯಕ ತಿಳಿಸಿದ್ದಾರೆ.
ಮತ್ತೊಂದು ಕಾರಿನಲ್ಲಿ ಅಜರುದ್ದೀನ್ ಹಾಗೂ ಕುಟುಂಬದವರನ್ನು ಹೋಟೆಲ್ ಕರೆದೊಯ್ಯಲಾಯಿತು.