March 14, 2026

Newsnap Kannada

The World at your finger tips!

baby

ಹೆಣ್ಣು ಶಿಶುವನ್ನು ತಿಪ್ಪೇಗೆಸೆದು ಹೋಗಿರುವ ಹೆತ್ತವರು – ರಕ್ಷಿಸಿದ ಗ್ರಾಮಸ್ಥರು

Spread the love

ಹೆಣ್ಣು ಶಿಶು ಹುಟ್ಟಿದೆ ಎಂಬ ಒಂದೇ ಕಾರಣಕ್ಕೆ ನವಜಾತ ಶಿಶುವನ್ನು ಹೆತ್ತವರು ತಿಪ್ಪೆಗುಂಡಿಯಲ್ಲಿ ಎಸೆದು ಹೋಗಿರುವ ಘಟನೆ ಕೋಲಾರದ ಮಾಲೂರಿನ ತಾಲೂಕಿನ ಚಿಕ್ಕನಾಯಕನ ಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಹೆಣ್ಣು ಶಿಶು ಹುಟ್ಟಿದೆ ಎಂಬ ಕಾರಣಕ್ಕಾಗಿ ಪಾಪಿಗಳು ತಿಪ್ಪೆಗುಂಡಿಗೆ ಬಿಸಾಡಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ತಿಪ್ಪೇಗುಂಡಿಯ ಬಳಿ ಮಗು ಅಳುತ್ತಿದ್ದ ಶಬ್ದ ಕೇಳಿದ ಗ್ರಾಮಸ್ಥರು ಶಿಶುವನ್ನು ರಕ್ಷಿಸಿದ್ದಾರೆ.

ನಂತರ ಸ್ಥಳೀಯ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಹೆಣ್ಣು ಶಿಶುವಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

error: Content is protected !!