ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮಲ್ಲೇ ಬಹು ಬೇಗ ಆವಿಷ್ಕಾರ ಮಾಡಿರುವ ಕೊರೊನಾ ಲಸಿಕೆಯನ್ನು ಸರ್ಕಾರಿ ವ್ಯವಸ್ಥೆಯಲ್ಲೇ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಲಸಿಕೆಯನ್ನು ಮೊದಲಿಗೆ ಕೊರೊನಾ ಯೋಧರಿಗೆ ನೀಡಬಹುದು ಎಂಬ ಅಭಿಪ್ರಾಯ ಇದೆ. 3 ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದ ಬಳಿಕ ಅಂತಿಮವಾಗಿ ಪರವಾನಗಿ ದೊರೆಯಬಹುದು. ಇದು ಯಶಸ್ವಿಯಾದ ಲಸಿಕೆ ಹಾಗೂ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ತಿಳಿದುಬಂದಿದೆ.
ಸರ್ಕಾರಿ ವ್ಯವಸ್ಥೆಯಲ್ಲಿ ಲಸಿಕೆ ವಿತರಣೆ:
ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆ ಮಾಡಲು ಸಿದ್ಧತೆ ಪೂರ್ಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕಿದ್ದರೆ ಅದನ್ನೂ ಪಡೆಯುವ ಬಗ್ಗೆ ಚಿಂತಿಸಲಾಗುವುದು ಎಂದರು.
ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಮತ್ತು ಅವರ ಸಂಪರ್ಕಿತರಲ್ಲಿ ಒಟ್ಟು 48 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಪೈಕಿ 34 ಮಂದಿ ಯು.ಕೆ.ಯಿಂದ ಹಿಂದಿರುಗಿದವರಾಗಿದ್ದಾರೆ. ಇವರೆಲ್ಲರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, 10 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾಗಿದೆ. ಇವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಯಾರಿಗೂ ರೋಗ ತೀವ್ರವಾಗಿ ಕಾಡಿಲ್ಲ ಎಂದರು.
ಯು.ಕೆ.ಯಿಂದ ಹಿಂದಿರುಗಿದವರಲ್ಲಿ 75 ಮಂದಿಯ ಸಂಪರ್ಕ ಪತ್ತೆಯಾಗಿಲ್ಲ. ಇದನ್ನು ಬೇಗನೆ ಪತ್ತೆ ಮಾಡಿ ಎಂದು ಬಿಬಿಎಂಪಿ ಹಾಗೂ ಗೃಹ ಇಲಾಖೆಗೆ ಕೋರಲಾಗಿದೆ. 75 ರಲ್ಲಿ ಮೂವರು ಮಾತ್ರ ವಿದೇಶಿ ವಿಳಾಸ ಹೊಂದಿದ್ದಾರೆ. ಕೆಲ ವಿದೇಶಿ ಪ್ರಜೆಗಳ ಪಾಸ್ ಪೋರ್ಟ್ ನಲ್ಲಿ ಮಾಹಿತಿ ಕೊರತೆ, ಸಿಮ್ ಸಮಸ್ಯೆಯಿಂದಾಗಿ ಸಂಪರ್ಕ ಪತ್ತೆಯಾಗದೇ ಇರಬಹುದು ಎಂದು ಸ್ಪಷ್ಟಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು