ರಸ್ತೆ ಅಪಘಾತವೊಂದರಲ್ಲಿ ಮೂರು ಸಾವನ್ನಪ್ಪಿ , 11 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಸುವರ್ಣಾವತಿ ಡ್ಯಾಂ ಬಳಿ ಸಂಭವಿಸಿದೆ.
ತಿರುಪ್ಪೂರಿನಿಂದ ಮೈಸೂರಿನತ್ತ ಹೊರಟಿದ್ದ ಟೆಂಪೋ ಟ್ರಾವೆಲರ್ ಮೊಗುಚಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ತೀವ್ರವಾಗಿ ಗಾಯಗೊಂಡ 11 ಮಂದಿಯನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಅಪಘಾತದಲ್ಲಿ ಸಾವನ್ನಪ್ಪಿದವರ ಹಾಗೂ ಗಾಯಗೊಂಡವರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.