ಚಿನ್ನಾಭರಣ ಖರೀದಿಗೆ ನಿಮ್ಮ ಗ್ರಾಹಕರನ್ನು ತಿಳಿಯಿರಿ(ಕೆವೈಸಿ) ಸಲ್ಲಿಕೆ ಕಡ್ಡಾಯವಾಗಿತ್ತು. ಆದರೆ ಈಗ 2 ಲಕ್ಷ ರುಗಳ ತನಕ ಚಿನ್ನಾಭರಣ ಖರೀದಿಗೆ ಕೆವೈಸಿ ಬೇಕಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ.
ನಗದು ಮೂಲಕ ಖರೀದಿಸುವ ಚಿನ್ನ, ಬೆಳ್ಳಿ ಮೊದಲಾದ ಬೆಲೆಬಾಳುವ ವಸ್ತುಗಳ ಖರೀದಿಗೆ ಕೆವೈಸಿ ಕಡ್ಡಾಯವಲ್ಲ. ಭಾರಿ ಮೊತ್ತದ ನಗದು ರೂಪದ ವ್ಯವಹಾರಗಳಿಗೆ ಆಧಾರ್ ಮತ್ತು ಪ್ಯಾನ್ ನಂತಹ ದಾಖಲೆಗಳ ಸಲ್ಲಿಕೆ ಕಡ್ಡಾಯವಾಗಿರುತ್ತದೆ.
2020ರ ಡಿಸೆಂಬರ್ 28ರಂದು ಎರಡು ಲಕ್ಷ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಖರೀದಿ ಮಾಡುವ ಸಂದರ್ಭದಲ್ಲಿ ಕೆವೈಸಿ ಕಡ್ಡಾಯ ಎಂದು ತಿಳಿಸಲಾಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿ, 10 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ರೂಪದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರು ಮಾತ್ರ ಅಗತ್ಯವಾದ ದಾಖಲೆಗಳನ್ನು ಸಲ್ಲಿಸಬೇಕಿದೆ ಎಂದು ಹೇಳಿದೆ
2020ರ ಡಿಸೆಂಬರ್ 20 ರಂದೇ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಲಕ್ಷ ರೂಪಾಯಿವರೆಗೆ ಚಿನ್ನಾಭರಣ ಖರೀದಿಗೆ ಕೆವೈಸಿ ಬೇಕಿಲ್ಲವೆಂದು ನಿಯಮದ ಕುರಿತು ಸ್ಪಷ್ಟನೆ ನೀಡಲಾಗಿದೆ . 10 ಲಕ್ಷ ರು ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ರೂಪದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರು ಕೆವೈಸಿ ದಾಖಲೆ ನೀಡಬೇಕಿದೆ ಎಂದು ಹೇಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು