2019 ರ ಫೆಬ್ರವರಿ 26 ರಂದು ಭಾರತ ಬಾಲಾಕೋಟ್ ನಲ್ಲಿ ನಡೆಸಿದ ಏರ್ ಸ್ಟ್ರೈಕ್ ನಲ್ಲಿ 300 ಮಂದಿ ಭಯೋತ್ಪಾದಕರು ಹತರಾಗಿದ್ದು ನಿಜ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿ ಆಘಾ ಹಿಲಾಲಿ ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದರ ಚರ್ಚೆಯಲ್ಲಿ ಮಾತನಾಡುತ್ತಿರುವ ವೇಳೆಯಲ್ಲಿ 300 ಭಯೋತ್ಪಾದಕರು ಹತರಾಗಿದ್ದಾರೆಂದು ತಿಳಿಸಿದ್ದಾರೆ.
ಭಾರತದ ದಾಳಿಯ ನಂತರ ಯಾವುದೇ ಸಾವು ನೋವು ಸಂಭವಿಸಿರಲಿಲ್ಲವೆಂದು ಸುಳ್ಳು ಹೇಳಿದ್ದ ಪಾಕಿಸ್ತಾನ ಬಣ್ಣ ಮತ್ತೊಮ್ಮೆ ಬಯಲಾಗಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಾಲಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ತರಬೇತಿ ಶಿಬಿರದ ಮೇಲೆ ಭಾರತೀಯ ವಾಯುಪಡೆ ಏರ್ ಸ್ಟ್ರೈಕ್ ನಡೆಸಿದಾಗ ಸಾವು-ನೋವಿನ ಬಗ್ಗೆ ಪಾಕಿಸ್ತಾನ ಅಲ್ಲಗಳೆದಿತ್ತು.
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಏರ್ ಸ್ಟ್ರೈಕ್ ನಡೆಸಿದ್ದು, ದಾಳಿಯಲ್ಲಿ 300 ಭಯೋತ್ಪಾದಕರು ಸಾವನ್ನಪ್ಪಿದ್ದರು ಎನ್ನುವುದು ಈಗ ಬಯಲಾಗಿದೆ.
- ಡಿ.20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಿಎಂ
- ವಿಷಯುಕ್ತ ಮದ್ಯ ಸೇವಿಸಿ 58 ಮಂದಿ ದುರ್ಮರಣ
- ರಾಜ್ಯ ಸರ್ಕಾರದಿಂದ ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಳ
- ನಿವೃತ್ತ ಸಿಜಿಎಂ ಎ.ಕೆ.ಸಿಂಗ್ ‘ಬಂಧನ್ ಬ್ಯಾಂಕ್’ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಕ
- ಪುನೀತ್ ಮತ್ತೆ ಹುಟ್ಟಿ ಬಂದರೆ ಮಗಳ ಹೊಟ್ಟೆಯಲ್ಲಿ : ಆತ್ಮ ಸಂಭಾಷಣೆ ಯಲ್ಲಿ ಪುನೀತ್ ಹೇಳಿಕೆ