ಈ ವರ್ಷ ನಾನು ಹುಟ್ಟು ಹಬ್ಬವನ್ನು ಆಚರಿಸಲ್ಲ. ಹಾಗಾಗಿ ನೀವು ದೂರದ ಊರುಗಳಿಂದ ಹಣ ಖರ್ಚು ಮಾಡಿಕೊಂಡು ಬರಬೇಡಿ ಎಂದು ಡಿ ಬಾಸ್ , ನಟ ದರ್ಶನ್ ಅಭಿಮಾನಿ ಗಳಲ್ಲಿ ಮನವಿ ಮಾಡಿದ್ದಾರೆ.
2020ರಲ್ಲಿ ಕೊರೋನಾ ಕಾರಣದಿಂದ ಎಷ್ಟೋ ಜನ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದೀರಿ. ಇಂತಹ ಸಮಯದಲ್ಲಿ ಹಣ ವ್ಯಯ ಮಾಡೋದು ಬೇಡ. ಎಷ್ಟೋ ಜನ ಕೆಲಸ ಕಳೆದುಕೊಂಡರು. ಹೊಟ್ಟೆಗೆ ಹಿಟ್ಟಿಲ್ಲ. 2020ರಲ್ಲಿ ವಿಧಿ ನಮಗೆ ಹಲವು ಪಾಠ ಕಲಿಸಿದೆ. ಆದ್ದರಿಂದ ಮೊದಲು ನೀವು ಚೆನ್ನಾಗಿರಿ ಎಂದು ಹೇಳಿದ್ದಾರೆ.
2022ಕ್ಕೆ ಈ ಎಲ್ಲಾ ಕಷ್ಟಗಳು ದೂರವಾದ ಮೇಲೆ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳೋಣ. ಕೊರೊನಾದಿಂದಾ ನಿಮ್ಮ ನಷ್ಟವನ್ನು ತುಂಬಿಕೊಳ್ಳಿ. ಶುಭಾಶಯ ತಿಳಿಸಲು ಬೆಂಗಳೂರಿಗೆ ಬರಬೇಡಿ ಅಂತ ಹೇಳಿದರು.