ಸರ್ಕಾರಿ ನೌಕರರಿಗೆ ಸಿಹಿಸುದ್ದಿ.
ರಾಜ್ಯ ಸರ್ಕಾರವು ಇತ್ತೀಚೆಗೆ ರದ್ದು ಮಾಡಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಲು ಸಮ್ಮತಿಸಿದೆ.
ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ವಿಷಯ ತಿಳಿಸಿ, ಸಚಿವಾಲಯ ನೌಕರರ ಗಳಿಕೆ ರಜೆ ನಗದೀಕರಣ ತಡೆಹಿಡಿರುವುದನ್ನು ವಾಪಸ್ ಪಡೆಯುವುದಾಗಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.
ಬೇಡಿಕೆಗಳನ್ನು ಏನು?
- ಸ್ಥಗಿತಗೊಂಡಿರುವ ತುಟ್ಟಿಭತ್ಯೆಯನ್ನು ಮತ್ತೆ ನೀಡಬೇಕು
- ನಿವೃತ್ತಿ ಹೊಂದಿದ ಅಧಿಕಾರಿ ಹಾಗೂ ನೌಕರರ ನೇಮಕವನ್ನು ರದ್ದು ಮಾಡಬೇಕು.
- ಹೊರಗುತ್ತಿಗೆಯನ್ನು ನಿಲ್ಲಿಸಬೇಕು.
- ನೌಕರ ವಿರೋಧಿ ನಿಯಮಾವಳಿಗಳನ್ನು ಕೂಡಲೇ ಹಿಂಪಡೆಯಬೇಕು.