ರಾಜ್ಯದಲ್ಲಿನ ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ತಾವು ಪಡೆಯುವ ಅಕ್ಕಿ, ಗೋದಿಗೆ ಪ್ರತಿ ಕೆಜಿಗೆ 2 ರಿಂದ 3ರು ಬೆಲೆ ಕೊಡಬೇಕು.
ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡುದಾರರ ಪಡಿತರಕ್ಕೆ ಬೆಲೆ ನಿಗದಿ ಮಾಡಲು ಆಲೋಚನೆ ಮಾಡಿದೆ.
ಆ ಮೂಲಕ ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಲಿದೆ.
ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿ ಹಾಗೂ ಗೋಧಿಗೆ ಪ್ರತಿ ಕೆಜಿಗೆ 2 ರೂ. ನಿಂದ 3 ರೂ. ವರೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರದ ಚಿಂತನೆಯನ್ನು ಜಾರಿ ಮಾಡಲು ತಯಾರಿ ನಡೆಸಿದೆ.
ಬಿಪಿಎಲ್ ಫಲಾನುಭವಿಗಳಿಗೆ ಉಚಿತವಾಗಿ ವಿತರಿಸುತ್ತಿರುವ ಅಕ್ಕಿ ಹಾಗೂ ಗೋಧಿ ಪ್ರತಿ ಕೆಜಿಗೆ 2 ರೂ. ನಿಂದ 3 ರೂ. ವರೆಗೆ ದರ ನಿಗದಿ ಮಾಡಲು ಆಹಾರ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಉಚಿತ ಅಕ್ಕಿ ನೀಡುವ ಬದಲು ಕನಿಷ್ಠ ದರ ನಿಗದಿ ಮಾಡುವುದು ಸೂಕ್ತ ಎಂದಿದ್ದಾರೆ. ಹಾಗಾಗಿ ದರ ನಿಗದಿಯ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ, ಬಜೆಟ್ ನಲ್ಲಿ ಈ ಯೋಜನೆ ಸೇರ್ಪಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸರ್ಕಾರ ಬಡವರಿಗೆ ಬರೆ ಎಳೆಯಲು ಸಜ್ಜಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು