ಮೈಸೂರು ಮಹಾನಗರ ಪಾಲಿಕೆಯ ನಿಯಮವನ್ನು ಗಾಳಿಗೆ ತೂರಿ ಎಲ್ಲೆಂದರಲ್ಲಿ ಕಸ ಹಾಕಿದ ಎರಡು ಮೊಬೈಲ್ ಮಾರಾಟ ಮಳಿಗೆಗಳಿಗೆ ನಗರ ಪಾಲಿಕೆ ದಂಡ ವಿಧಿಸಿದೆ.
ಪ್ರಸ್ತುತ ಸ್ವಚ್ಛ ಸರ್ವೇಕ್ಷಣ್ 2021ರ ಸರ್ವೇಕಾರ್ಯಗಳ ಅಂಗವಾಗಿ ಪಾಲಿಕೆಯ ಆಯುಕ್ತರು ಸೇರಿದಂತೆ ಎಲ್ಲಾ ಅಧಿಕಾರಿಗಳು ಪ್ರತಿದಿನ ಬೆಳಿಗ್ಗೆ 7 ರಿಂದ 9 ಗಂಟೆಯವರಗೆ ನಗರದ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ವೇಳೆಯಲ್ಲಿ ಸೋಮವಾರ ಜೋನ್-3 ವ್ಯಾಪ್ತಿಗೆ ಒಳಪಡುವ ವಾರ್ಡ್- 47 ರ ಕುವೆಂಪುನಗರದ ಅಕ್ಷಯ ಭಂಡಾರ್ನಲ್ಲಿರುವ ಸಂಗೀತ ಹಾಗೂ ಪೂರ್ವಿಕ ಮೊಬೈಲ್ ಮಳಿಗೆಗಳ ಹೆಸರಿನ ಬಿಲ್ಗಳು, ಮೊಬೈಲ್ ಬಾಕ್ಸ್ ಸೇರಿದಂತೆ ಇನ್ನಿತರ ತ್ಯಾಜ್ಯವಸ್ತುಗಳನ್ನು ರಸ್ತೆಬದಿಯಲ್ಲಿ ಸುರಿಯಲಾಗಿತ್ತು.
ಪರಿಶೀಲನೆ ಸಂದರ್ಭದಲ್ಲಿ ಮೊಬೈಲ್ ಬಿಲ್ ಅನ್ನು ಗಮನಿಸಿದ ಅಧಿಕಾರಿಗಳು, ತ್ಯಾಜ್ಯವನ್ನು ವಾಪಸ್ಸು ಆಯಾ ಮಳಿಗೆಯ ಮುಂದೆ ಹಾಕಿದ್ದಾರೆ. ನಂತರ ಎರಡೂ ಮಳಿಗೆಗಳಿಗೂ 1 ಸಾವಿರ ರೂ. ದಂಡ ವಿಧಿಸಿ, ಇಂತಹ ಬೇಜಾವಬ್ದಾರಿತನ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಕಸ ಹಾಕಲೆಂದು ಪಾಲಿಕೆಯಿಂದ ನಿಗದಿತ ಸ್ಥಳ ಗುರುತಿಸಲಾಗಿದೆ. ಪ್ರತಿದಿನವೂ ಕಸ ವಿಲೇವಾರಿ ಮಾಡಲು ಪೌರಕಾರ್ಮಿಕ ಸಿಂಬಂಧಿಗಳು ಶ್ರಮವಹಿಸುತ್ತಾರೆ. ಆದರೆ ಕೆಲವರು ಎಲ್ಲೆಂದರಲ್ಲಿ ಕಸ ಹಾಕುವುದರಿಂದ ನಗರವನ್ನು ಸ್ವಚ್ಛವಾಗಿಡಲು ಸಾಧ್ಯವಿಲ್ಲ. ಹಾಗಾಗಿ ಇನ್ನು ಮುಂದೆ ಇಂತಹ ಘಟನೆ ನಡೆಯಬಾರದೆಂದು ಎರಡು ಮಳಿಗೆಗಳಿಗೆ ದಂಡ ವಿಧಿಸಲಾಗಿದೆ ಎಂದು ವಲಯ 3 ರ ಆಯುಕ್ತ ಟಿ.ಎಸ್.ಸತ್ಯಮೂರ್ತಿ ಅವರು ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ