ಕೆಪಿಸಿಸಿ ಕಚೇರಿಯಲ್ಲೇ ಕಾಂಗ್ರೆಸ್ ನಾಯಕರ ಹೊಡೆದಾಟ

Team Newsnap
1 Min Read

ಕಾಂಗ್ರೆಸ್ ಎಂಎಲ್​ಸಿ ನಾರಾಯಣ ಸ್ವಾಮಿ ಮತ್ತು ಮುಖಂಡ ಮನೋಹರ್ ನಡುವೆ ಶುಕ್ರವಾರ ಮಧ್ಯಾಹ್ನ ಗಲಾಟೆ ನಡೆದು, ಉಭಯ ನಾಯಕರು ಕೈ-ಕೈ ಮಿಲಾಯಿಸಿಕೊಂಡಿರುವ ಘಟನೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜರುಗಿದೆ.

ಕಾರ್ಯಾಧ್ಯಕ್ಷರುಗಳ ಸಮ್ಮುಖದಲ್ಲಿಯೇ ಈ ಗಲಾಟೆ ನಡೆದಿದೆ, ಮಾಧ್ಯಮದವರು ಸ್ಥಳಕ್ಕೆ ಹೋಗುತ್ತಿದ್ದಂತೆ ಕಚೇರಿಯ ಬಾಗಿಲನ್ನು ಕಾಂಗ್ರೆಸ್​ ಮುಖಂಡರು ಬಂದ್ ಮಾಡಿಕೊಂಡರು.

ಕೆಲ ಸಮಯದ ಬಳಿಕ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಕೆಪಿಸಿಸಿ ಕಚೇರಿಯಿಂದ ಹೊರನಡೆದರು. ಆದರೆ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯಾವುದೇ ಗಲಾಟೆ ನಡೆದಿಲ್ಲ ಎಂದು ಹಾರಿಕೆ ಉತ್ತರ ನೀಡಿದರು.

ಇಂದು ಬೆಳಗ್ಗೆ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಅವರು ನಮ್ಮ ಸದಸ್ಯರನ್ನು ಸೆಳೆಯುವ ಕೆಲಸ ಮಾಡಿದ್ದರು. ಆ ವಿಚಾರವಾಗಿ ಜೋರುಜೋರು ಮಾತು ನಡೆಯಿತು.
ಆದರೆ ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ. ನಾವು ಬಾಗಿಲು ಹಾಕಿ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ. ಚರ್ಚೆಯನ್ನ ಹೊರತುಪಡಿಸಿ ಬೇರೆ ಏನು ಆಗಿಲ್ಲ ಎನ್ನುವ ಮೂಲಕ ಘಟನೆಯನ್ನು ಮುಚ್ಚಿಹಾಕಲು ಯತ್ನಿಸಿದರು.

Share This Article
Leave a comment