ಶಿವಮೊಗ್ಗದಲ್ಲಿ ಭಾರೀ ಸ್ಫೋಟದಿಂದ ಸಾವು-ನೋವು ಸಂಭವಿಸಿದ ಬೆನ್ನಲ್ಲೇ ಧಾರವಾಡದಲ್ಲಿ ಕ್ರಷರ್ ಗಳ ಮೇಲೆ ಆಂತರಿಕ ಭದ್ರತಾ ವಿಭಾಗ (ಐಎಸ್ಡಿ) ದಾಳಿ ನಡೆಸಿದೆ.
ಕಲಘಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನ ಕ್ರಷರ್ ಮೇಲೆ ಧಾಳಿ ನಡೆಸಿ ಐಎಸ್ ಡಿ ತಂಡ 234 ಜಿಲೆಟಿನ್ ಕಡ್ಡಿ ಸೇರಿದಂತೆ ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಕಲ್ಲು ಬಂಡೆ ಒಡೆಯಲು ಮಾಲೀಕರು ಭಾರಿ ಪ್ರಮಾಣದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ. ಈ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕ ವಿರೇನ್ಗೌಡ ಪಾಟೀಲ್ ಮೇಲೆ ಕೇಸ್ ದಾಖಲಿಸಲಾಗಿದೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಮಾಲೀಕನ ವಿರುದ್ದ ಪ್ರಕರಣ ದಾಖಲಾಗಿದೆ.