ರಿಷಿಕೇಶದ ಗವಿಯಲ್ಲಿ ವಾಸಿಸುವ 83 ವರ್ಷದ ಸಾಧುವೊಬ್ಬರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕಾಗಿ ರಿಷಿಕೇಶದ ಸಾಧು ವಿಎಚ್ಪಿಗೆ ಒಂದು ಕೋಟಿ ರು. ಕೊಟ್ಟಿರುವುದಾಗಿ ವರದಿಯಾಗಿದೆ.
‘ಸುಮಾರು 50 ವರ್ಷಗಳಿಂದ ನಾನು ಗುಹೆಯಲ್ಲಿಯೇ ವಾಸಿಸುತ್ತಿದ್ದೇನೆ. ಗವಿಗೆ ಭೇಟಿ ನೀಡುವ ಭಕ್ತರು ನೀಡುವ ಕಾಣಿಕೆಗಳಿಂದ ನಾನು ಬದುಕುತ್ತಿದ್ದೇನೆ. ರಾಮ ಮಂದಿರ ನಿರ್ಮಾಣಕ್ಕಾಗಿ ವಿಎಚ್ಪಿ ನಡೆಸುತ್ತಿರುವ ಅಭಿಯಾನದ ಬಗ್ಗೆ ತಿಳಿಯುತ್ತಿದ್ದಂತೆ ದೇಣಿಗೆ ನೀಡಲು ನಾನು ನಿರ್ಧರಿಸಿದೆ’ ಎಂದು ಸ್ವಾಮಿ ಶಂಕರ್ ದಾಸ್ ಹೇಳಿದ್ದಾರೆ.
ಸಾಧುವೊಬ್ಬರು 1 ಕೋಟಿ ರು ಮೊತ್ತದ ಚೆಕ್ ನೀಡಿದ್ದಾರೆ. ಖಾತೆಯಲ್ಲಿ ಅಷ್ಟು ಹಣ ಇರುವುದು ಖಾತ್ರಿಯಾಗಿದೆ. ಅನಂತರ ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ಸ್ಥಳೀಯರನ್ನು ಅಧಿಕಾರಿಗಳು ಬ್ಯಾಂಕ್ಗೆ ಕರೆಸಿ, ರಾಮ ಮಂದಿರ ಟ್ರಸ್ಟ್ಗೆ ಸ್ವಾಮಿ ಶಂಕರ್ ದಾಸ್ ದೇಣಿಗೆ ನೀಡಲು ನೆರವಾಗಿದ್ದಾರೆ.
ಉತ್ತರಾಖಂಡದಲ್ಲಿ ವಿಎಚ್ಪಿ ಒಟ್ಟಾರೆ 5 ಕೋಟಿ ರು ದೇಣಿಗೆ ಸಂಗ್ರಹಿಸಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ