ಹೆಚ್.ಡಿ ದೇವೇಗೌಡರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಜೆಡಿಎಸ್ ಒಂದು ಪೊಲಿಟಿಕಲ್ ಪಾರ್ಟಿನೇ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದು, ನಾಳೆಯ ಕೇಂದ್ರ ಬಜೆಟ್ ಬಗ್ಗೆ ಯಾವ ನಿರೀಕ್ಷೆಯನ್ನೂ ಇಟ್ಟುಕೊಂಡಿಲ್ಲ. ಕೇಂದ್ರದವರು ಆರ್ಥಿಕ ಸರ್ವೇ ಬಗ್ಗೆ ಸುಳ್ಳು ಹೇಳ್ತಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಜಿಡಿಪಿ ಪಾತಾಳಕ್ಕೆ ಕುಸಿದಿದೆ ಎಂದರು.
ಕೊರೋನಾ ಕಾರಣದಿಂದ ಜಿಡಿಪಿ ಬೆಳವಣಿಗೆ 4.2 ಇತ್ತು. ಸದ್ಯ -7.7 ಇದೆ. ಜಿಡಿಪಿ ಬೆಳವಣಿಗೆ ನಕರಾತ್ಮಕವಾಗಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ದೇಶದ ಜನತೆಗೆ ಕೇಂದ್ರ ಸರ್ಕಾರ ಜಿಡಿಪಿ ಬೆಳವಣಿಗೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯಂತೂ ತಾಂಡವವಾಡ್ತಿದೆ. ನಗರ ಪ್ರದೇಶದಲ್ಲಿ ಶೇ 9.2 ನಿರೋದ್ಯೋಗ ಸಮಸ್ಯೆ ಇದ್ರೆ, ಗ್ರಾಮೀಣ ಪ್ರದೇಶದಲ್ಲಿ ಶೇ 8.9 ಇದೆ. ದೇಶ ಅಭಿವೃದ್ಧಿ ಮಾಡೋಕೆ ಇವರ ಬಳಿ ದುಡ್ಡು ಎಲ್ಲಿದೆ ಎಂದು ವಾಗ್ದಾಳಿ ಮಾಡಿದರು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್