ಸಾಲಬಾಧೆ; ಹುಣಸೂರಿನ ರೈತ ಆತ್ಮಹತ್ಯೆ

Team Newsnap
0 Min Read

ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಹರಳಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತ ಕೃಷ್ಣೇಗೌಡ (65) ಎನ್ನಲಾಗಿದೆ. ಇವರು ತಮ್ಮ ಜಮೀನಿನಲ್ಲಿ ತಂಬಾಕು, ಜೋಳ ಮತ್ತು ರಾಗಿ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ ರೂ. ಸಾಲ ಮಾಡಿದ್ದರು. ಒಡವೆ ಸಾಲ 1.54 ಲಕ್ಷ ರೂ., 4 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು.

ಈ ಸಾಲವನ್ನ ತೀರಿಸಲಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment