ಬಿಜೆಪಿ – ಜೆಡಿಎಸ್ ಮೈತ್ರಿ ಯ ಫಲವಾಗಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಭಾಗಿಯಾಗದ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವಿರೋಧವಾಗಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿ, ಸಭಾಪತಿಗಳ ಸ್ಥಾನದಲ್ಲಿ ಕುಳಿತುಕೊಂಡರು.
ಸಭಾಪತಿಗಳ ಸ್ಥಾನಕ್ಕೆ ಜೆಡಿಎಸ್ನಿಂದ ಬಸವರಾಜ ಹೊರಟ್ಟಿ ಅವರ ಹೆಸರನ್ನು ಕೆ ಟಿ ಶ್ರೀಕಂಠೇಗೌಡರು ಸೂಚಿಸಿದರು. ಆ ಬಳಿಕ ಸಭಾಪತಿಗಳ ಸ್ಥಾನಕ್ಕೆ ಕಾಂಗ್ರೆಸ್ನಿಂದ ನಾಸೀರ್ ಅಹ್ಮದ್ ಪರ ಹೆಸರನ್ನು ಸೂಚಿಸಿದ ಸದಸ್ಯ ಎಂ.ನಾರಾಯಣಸ್ವಾಮಿ ಮೊದಲು ಚುನಾವಣಾ ಪ್ರಕ್ರಿಯೆ ಮುಂದೂಡಿ. ಮೊದಲು ನಿನ್ನೆಯ ಕಾಯಿದೆ ಬಗ್ಗೆಯ ಗೊಂದಲವನ್ನು ಸರಿಪಡಿಸಿ ಎಂದು ಸಭಾಧ್ಯಕ್ಷ ಪ್ರಾಣೇಶ್ ಅವರಲ್ಲಿ ಮನವಿ ಮಾಡಿದರು.
ಎಂ.ನಾರಾಯಣಸ್ವಾಮಿ ಮನವಿ ತಿರಸ್ಕರಿಸಿದ ಸಭಾಧ್ಯಕ್ಷ ಎಂ.ಕೆ. ಪ್ರಾಣೇಶ್, ಮೊದಲು ಚುನಾವಣೆ ನಡೆಸೋಣ. ಅಜೆಂಡಾದ ಪ್ರಕಾರ ಹೋಗಬೇಕಾಗುತ್ತದೆ. ನೀವೆಲ್ಲಾ ನಿಮ್ಮ ನಿಮ್ಮ ಆಸನಕ್ಕೆ ಹೋಗಿ ಎಂದು ಸೂಚನೆ ನೀಡಿದ್ದರು. ಚುನಾವಣಾ ಪ್ರಕ್ರಿಯೆ ನಡೆಯಲು ಅವಕಾಶ ಮಾಡಿಕೊಟ್ಟರು.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು