ಕೋವಿಡ್ ಕಾರಣಕ್ಕಾಗಿ ರಾಜ್ಯದ ವಿವಿಧ ದೇವಾಲಯಗಳು ಹಾಗೂ ಜಾತ್ರಾ ಮಹೋತ್ಸವಗಳಿಗೆ ಕಡಿವಾಣ ಹಾಕಿದ್ದ ಷರತ್ತು ಹಾಗೂ ನಿಯಮಗಳನ್ನು ತೆರವುಗೊಳಿಸಲಾಗಿದೆ.
ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಅಯುಕ್ತ ಅದೇಶ ಹೊರಡಿಸಿ, ಫೆಬ್ರವರಿ ತಿಂಗಳಲ್ಲಿ ರಾಜ್ಯದಲ್ಲೆಡೆ ಧಾರ್ಮಿಕ ಜಾತ್ರಾ ಮಹೋತ್ಸವಗಳು ನಡೆಯಲಿವೆ. ಸಾವಿರಾರು ಭಕ್ತಸಮೂಹ ಮತ್ತು ದೇವಾಲಯದ ಸಮಿತಿಗಳ ಧಾರ್ಮಿಕ ಭಾವನೆಗಳಿಗೆ ಗೌರವಿಸಿ, ಈ ತಿಂಗಳ ನಡೆಯುವ ಜಾತ್ರಾ ಮಹೋತ್ಸವ, ದಾಸೋಹ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ.
ಕೋವಿಡ್ ಕಾರಣದಿಂದ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ, ಉತ್ಸವ, ಪ್ರಸಾದ ವಿತರಣೆ, ದಾಸೋಹ, ತೀರ್ಥ ವಿತರಣೆ ಮತ್ತು ದೇವರ ದರ್ಶನ, ಹಾಗೂ ಬ್ರಹ್ಮರಥೋತ್ಸವ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿತ್ತು.
ಆದರೆ ಭಕ್ತರಿಂದ ದೇವಾಲಯಗಳಿಂದ ಮನವಿ ಬಂದ ಹಿನ್ನೆಲೆ ಸೆಪ್ಟೆಂಬರ್ 1ರಂದು ಕೆಲವು ನಿಯಮಗಳಲ್ಲಿ ಸಡಿಲಗೂಳಿಸಲಾಗಿತ್ತು.
ಫೆಬ್ರವರಿ ತಿಂಗಳು ಅನೇಕ ಜಾತ್ರೆ, ಮಹೋತ್ಸವ, ಉತ್ಸವ ನಡೆಯಲಿವೆ. ಭಕ್ತರ ಭಾವನೆಗಳಿಗೆ ಮನ್ನಣೆ ನಿಡುವ ದೃಷ್ಟಿಯಿಂದ ಈ ಹಿಂದೆ ನಿಷೇಧ ಹೇರಿದ್ದ ಎಲ್ಲಾ ನಿಯಮಗಳನ್ನು ತೆರವು ಮಾಡಿ ಅದೇಶ ಹೊರಡಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು