February 22, 2026

Newsnap Kannada

The World at your finger tips!

shivaraj

ರೈತರ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್‌ ಬೆಂಬಲ

Spread the love

ರೈತರು ಬೀದಿಯಲ್ಲಿ ಕುಳಿತು ಊಟ ಮಾಡ್ತಿರೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ. ನಮ್ಮ ಸಮಸ್ಯೆಗಳನ್ನೇ ನಾವು ಪರಿಹರಿಸಿಕೊಳ್ಳೋಕೆ ಆಗ್ತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ. ಆದರೆ ರೈತರಿಗೆ ನಮ್ಮ ಬೆಂಬಲ ಖಂಡಿತಾ ಇದ್ದೇ ಇರುತ್ತೆ ಎಂದು ನಟ ಶಿವರಾಜ್‌ಕುಮಾರ್ ಹೇಳುವ ಈ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

shivaraj kumar

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೊರೆಯುವ ಚಳಿಯ ನಡುವೆ ದೆಹಲಿಯಲ್ಲಿ ನಡೆಯುತ್ತಿರುವ. ರೈತರ ಪ್ರತಿಭಟನಾ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡ್ತಿದ್ದೆ. ಆದ್ರೆ ಅಧಿಕಾರಿ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡ್ತಿಲ್ಲ ಅಂತಾರೆ. ಆದ್ರೆ ಅದು ನಮ್ಮಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದ್ರಿಂದ ಏನೂ ಸಾಧ್ಯವಾಗಲ್ಲ. ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ. ಕೆಲವೊಂದನ್ನು ಸರ್ಕಾರದಿಂದ ಮಾಡೋಕೆ ಮಾತ್ರ ಸಾಧ್ಯ ಎಂದು ಅವರು ಹೇಳಿದ್ದಾರೆ.

error: Content is protected !!