ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಫೋಟ: 11 ಮಂದಿ ದಾರುಣ ಸಾವು

Newsnap Team
1 Min Read

ತಮಿಳುನಾಡಿನ ಶಿವಕಾಸಿ ಬಳಿಯ ಸತ್ತೂರಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ಎಎನ್‌ಐ ಸುದ್ದಿ ಸಂಸ್ಥೆ ವರದಿ ಮೂಲದಂತೆ ತಮಿಳುನಾಡಿನ ಶಿವಕಾಸಿ ಬಳಿಯ ಸತ್ತೂರಿನ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಈ ಅವಘಡದಲ್ಲಿ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ ಎಂದು ವಿರುಧುನಗರ ಜಿಲ್ಲಾಧಿಕಾರಿ ಆರ್. ಕಣ್ಣನ್ ತಿಳಿಸಿದ್ದಾರೆ.

ಘಟನೆ ಸಂಭಸಿದ್ದು ಹೇಗೆ?

ಪಟಾಕಿ ತಯಾರಿಸಲು ಕೆಲವು ನಿರ್ದೀಷ್ಟ ರಾಸಾಯನಿಕಗಳನ್ನು ಬೆರೆಸುತ್ತಿರುವಾಗ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಚ್ಚನ್‌ಕುಲಂ ಗ್ರಾಮಕ್ಕೆ ಧಾವಿಸಿರುವ 10 ರಷ್ಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಘಟನೆಯಲ್ಲಿ 10ರಷ್ಟು ಮಂದಿ ಗಾಯಗೊಂಡಿದ್ದಾರೆ.
ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋದಿ ಸಂತಾಪ- ಪರಿಹಾರ ಘೋಷಣೆ:

ತಮಿಳುನಾಡು ಶಿವಕಾಸಿ ಬಳಿ ಪಟಾಕಿ ಕಾರ್ಖಾನೆ ಸ್ಫೋಟ ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದಾರೆ.

ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರು.ಗಳ ಪರಿಹಾರ ಘೋಷಿಸಿದ್ದಾರೆ.

ರಾಹುಲ್ ಸಂತಾಪ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿದ್ದಾರೆ.

ಅಲ್ಲದೆ ತುರ್ತಾಗಿ ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಎಲ್ಲ ನೆರವು ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Share This Article
Leave a comment