ಗಣರಾಜ್ಯೋತ್ಸವ ಗಲಭೆಗೆ ಟೂಲ್ಕಿಟ್ ರಚಿಸುವಲ್ಲಿ ಭಾಗವಹಿಸಿ, ಪ್ರಮುಖ ಪಾತ್ರವಹಿಸಿದ್ದರು ಎಂಬ ಆರೋಪದ ಮೇಲೆ ಬಾಂಬೆ ಹೈಕೋರ್ಟ್ ವಕೀಲೆ ನಿಕಿತಾ ಜಾಕೋಬ್ ವಿರುದ್ಧವೂ ಇದೀಗ ದೆಹಲಿ ಪೊಲೀಸರು ವಾರಂಟ್ ಹೊರಡಿಸಿದ್ದಾರೆ.
ವಕೀಲೆ ನಿಕಿತಾ ಜಾಕೋಬ್ ಅವರನ್ನು ಶೀಘ್ರದಲ್ಲಿ ದೆಹಲಿ ಪೊಲೀಸರು ಬಂಧಿಸಲಿದ್ದಾರೆ. ಮತ್ತೋರ್ವ ಹೋರಾಟಗಾರ ಶಾಂತನೂ ಅವರನ್ನು ಪೊಲೀಸರು ಬಂಧಿಸುವುದಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಪರಿಸರ ಕಾರ್ಯಕರ್ತೆ ದಿಶಾ ರವಿ (21) ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
ಈಗ ದೆಹಲಿ ಪೊಲೀಸರು ವಾರಂಟ್ ಹೊರಡಿಸುತ್ತಿದ್ದಂತೆ ನಿಕಿತಾ ಜಾಕೋಬ್ ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ಧಾರೆ.
ನಿಕಿತಾ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ 80 ದಿನಗಳಿಂದ ದೇಶದ ರೈತರು ದೆಹಲಿ ಹೊರ ವಲಯದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಗಣರಾಜ್ಯೋತ್ಸವದ ದಿನ ನಡೆದ ಗಲಭೆಯ ಸಂದರ್ಭದಲ್ಲಿ ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ, ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ರೈತರ ಪ್ರತಿಭಟನೆಯಲ್ಲಿ ಜನರು ಭಾಗವಹಿಸಬಹುದಾದ ವಿಭಿನ್ನ ಮಾರ್ಗಗಳನ್ನು ತಿಳಿಸುವ ಟೂಲ್ಕಿಟ್ ಅನ್ನು ವಕೀಲೆ ನಿಕಿತಾ ಶೇರ್ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ