January 29, 2026

Newsnap Kannada

The World at your finger tips!

lake

ಅಗ್ನಿ, ನೀರು ಪಾಲಾದ ಪತ್ನಿಯರು!ಗಂಡನ ಕಿರುಕುಳವೇ,ಆ ಇಬ್ಬರ ಆತ್ಮಹತ್ಯೆಗೆ ಕಾರಣ

Spread the love

ಗಂಡನೊಬ್ಬ ಮೊದಲ ಪತ್ನಿಗೆ ಮೂರು ಜನ ಗಂಡು ಮಕ್ಕಳಿದ್ದರೂ ಸಹ ಎರಡನೇ ಹೆಂಡತಿಗೆ ಎರಡು ಹೆಣ್ಣು ಮಕ್ಕಳು ಹುಟ್ಟಿದ್ದಕ್ಕೆ ಆಕೆಗೆ ಮಾನಸಿಕ ಕಿರುಕುಳ ಕೊಟ್ಟಿದ್ದಾನೆ. ಗಂಡನ ಕಿರುಕುಳ ತಾಳಲಾರದ ಎರಡನೇ ಹೆಂಡತಿ ತನ್ನ ಎರಡು ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಘಟಪ್ರಭಾ ನದಿಗೆ ಹಾರಿ ಪ್ರಾಣ ಬಿಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲೊಳಸೂರ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ ಸಾವಿತ್ರಿ.‌ ಆರೋಪಿ ಗಂಡನನ್ನು ರಾಜು ಬನಾಜ.

ರಾಜುವಿಗೆ ಈಗಾಗಲೇ ಮದುವೆಯಾಗಿತ್ತು, ಮೊದಲ ಹೆಂಡತಿಗೆ ಮೂರು ಮಕ್ಕಳು. ಈತ ನೀಡುತ್ತಿದ್ದ ಕಿರುಕುಳಕ್ಕೆ ಆಕೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದಳು.

ನಂತರ ರಾಜು ಬನಾಜ ಸಾವಿತ್ರಿಯನ್ನು ಮದುವೆಯಾದ. ಮೊದಲ ಹೆಂಡತಿಗೆ ಮೂರು ಗಂಡು ಮಕ್ಕಳಿರುವ ಕಾರಣ ಅವರ ಲಾಲನೆ ಪಾಲನೆ ಮಾಡೋಕೆ ಬೇಕು ಅಂತ ತನ್ನ ಸಹೋದರ ಸಂಬಂಧದಲ್ಲೆ ರಾಜು ಹಿರಿಯರನ್ನು ಒತ್ತಾಯಿಸಿ ಸಾವಿತ್ರಿ ಕೈ ಹಿಡಿದಿದ್ದ.

ಸಾವಿತ್ರಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದಳು. ಅಲ್ಲಿಂದ ವರಸೆ ಬದಲಿಸಿದ್ದ ರಾಜು, ಹೆಣ್ಣು ಮಕ್ಕಳನ್ನು ತಗೊಂಡು ನಾನೇನು ಮಾಡಲಿ ಅಂತ ಸಾವಿತ್ರಿಗೆ ಮಾನಸಿಕ ಕಿರುಕುಳ ನೀಡೋಕೆ ಶುರು ಮಾಡಿದ್ದ. ಅಲ್ಲದೆ ತವರು ಮನೆಯಿಂದ ಹಣ ತೆಗೆದುಕೊಂಡು ಬಾ ಅಂತ ಸಾವಿತ್ರಿಯನ್ನ ಪೀಡಿಸೋಕು ಶುರುಮಾಡಿದ್ದ.

ಹೀಗಾಗಿ ನನ್ನ ತಂಗಿ ತನ್ನ ಎರಡು ಮಕ್ಕಳನ್ನ ತೆಗೆದುಕೊಂಡು ಇಂತಹ ನಿರ್ಧಾರಕ್ಕೆ ಬಂದಿದ್ದಾಳೆ ಅಂತಾರೆ ಸಾವಿತ್ರಿ ಅಣ್ಣ ಭೀಮಶಿ. ಪೋಲಿಸರು ಪತಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!