ಅಭಿಮಾನಕ್ಕಿದು ಮಾದರಿ ಅಲ್ಲ – ಯಶ್: ಕೋಡಿದೊಡ್ಡಿ ಗ್ರಾಮಕ್ಕೆ ‌ಸಿದ್ದು ಭೇಟಿ‌

Team Newsnap
1 Min Read

ತನ್ನ ಅಂತ್ಯಕ್ರಿಯೆಯಲ್ಲಿ ಯಶ್ ಭಾಗವಹಿಸಬೇಕೆಂಬ ಕೋರಿಕೆಯೊಂದಿಗೆ ಮಂಡ್ಯದ ಕೋಡಿದೊಡ್ಡಿ‌ ಕೃಷ್ಣ ಎಂಬ ಅಭಿಮಾನಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟ ಯಶ್ ಟ್ವೀಟ್ ಮಾಡಿದ್ದಾರೆ

ys1

ಈ ಘಟನೆ ಕುರಿತಂತೆ ಯಶ್, ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು, ಜೀವನ, ಹೆಮ್ಮೆ. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ? ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆ ಮಂಡ್ಯ ಜಿಲ್ಲೆಯ ಕೆರಗೋಡು ಹೋಬಳಿಯ ಕೋಡಿದೊಡ್ಡಿ ಗ್ರಾಮದ ಕೃಷ್ಣ ತನ್ನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಹಾಗೂ ಯಶ್ ಭಾಗವಹಿಸಬೇಕೆಂದು ಪತ್ರ ಬರೆದಿಟ್ಟು ಆತ್ಮಹ್ಯೆಗೆ ಶರಣಾಗಿದ್ದನು.

ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯರವರು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಹಾಗೂ ಯಶ್ ಟ್ವೀಟರ್ ಮೂಲಕ ಅಭಿಮಾನಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Share This Article
Leave a comment