ಜನತೆ ನಿರೀಕ್ಷೆ ಇಟ್ಟುಕೊಂಡಿರುವ ರಾಜ್ಯ ಬಜೆಟ್ ಅನ್ನು ಸಿಎಂ ಯಡಿಯೂರಪ್ಪ ಮಾರ್ಚ್ 8 ರಂದು ಮಂಡನೆ ಮಾಡಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು
ಸಂಪುಟ ಸಭೆ ಬಳಿಕ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿ, ಕಳೆದ ಒಂದು ವರ್ಷದಿಂದಲೂ ಕೊರೊನಾ ಸೋಂಕಿನಿಂದಾಗಿ ರಾಜ್ಯದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಕಳೆದ ಮೂರು ತಿಂಗಳಿನಿಂದ ಆರ್ಥಿಕತೆ ಸ್ವಲ್ಪ ಚೇತರಿಕೆ ಕಂಡುಕೊಂಡಿದೆ . ಹೀಗಾಗಿ ಉತ್ತಮ ಬಜೆಟ್ ಮಂಡಿಸುವ ತಯಾರಿ ನಡೆಯುತ್ತಿದೆ ಎನ್ನಲಾಗಿದೆ.
ಈ ಬಾರಿಯ ಬಜೆಟ್ ಯಾವ ಯಾವ ಕ್ಷೇತ್ರಕ್ಕೆ ಯಾವ ರೀತಿ ಲಾಭವಾಗಲಿದೆ. ಜನಸಾಮಾನ್ಯರು, ರೈತರಿಗೆ ಬಜೆಟ್ ಮಂಡನೆ ನಿರೀಕ್ಷೆ ಇದೆ.