ಮದುವೆಗೆ ಇನ್ನೆರಡು ದಿನವಷ್ಟೇ ಬಾಕಿ ಇರುವಾಗಲೇ ತನ್ನ ಕೈಚಳಕ ತೋರಲು ಮುಂದಾಗಿದ್ದ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ.
ಹಸೆಮಣೆ ಏರಬೇಕಿದ್ದ ಮದುಮಗ ಈಗ ಕಂಬಿ ಎಣಿಸುತ್ತಿದ್ದಾನೆ.
ಹುಬ್ಬಳ್ಳಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಮತ್ತು ನಾಗರಿಕರು ಹಿಡಿದಿದ್ದಾರೆ.
ವಿಜಯಪುರದ ಪ್ರವೀಣಕುಮಾರ್ ಅಪ್ಪಾಸಾಹೇಬ್ ಪಾಟೀಲ ಬಂಧಿತ. ಈತ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ
ಪ್ರವೀಣ, ಕಳೆದ ಎರಡು ದಿನದ ಹಿಂದೆ ಹುಬ್ಬಳ್ಳಿಗೆ ಬಂದು ಭಾರತಿ ಲಾಡ್ಜ್ ನಲ್ಲಿ ತಂಗಿದ್ದ.
ಇಂದು ಕೊಪ್ಪಿಕರ ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕಿಗೆ ನುಗ್ಗಿ ಕ್ಯಾಷಿಯರ್ಗೆ ಚಾಕು ತೋರಿಸಿ, ಬ್ಯಾಗಿನಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಹಣವನ್ನು ಹಾಕಿಸಿದ್ದಾನೆ. ತಕ್ಷಣವೇ ಪರಾರಿಯಾಗಲು ಯತ್ನಿಸಿದಾಗ, ಬ್ಯಾಂಕಿನ ಮಹಿಳಾ ಸಿಬ್ಬಂದಿ ಕೂಗಿಕೊಂಡಿದ್ದಾರೆ.
ಕೊಪ್ಪಿಕರ ರಸ್ತೆಯ ಮೆಟ್ರೋ ಪೊಲೀಸ್ ಹೋಟೆಲ್ ಬಳಿ ಕರ್ತವ್ಯನಿರತ ದಕ್ಷಿಣ ಸಂಚಾರಿ ಠಾಣೆಯ ಪೊಲೀಸ್ ಉಮೇಶ ಹಾಗೂ ಉಪನಗರ ಠಾಣೆಯ ಪೇದೆಯೊಬ್ಬರು ಆರೋಪಿಯನ್ನು ಹಣದ ಸಮೇತ ಹಿಡಿದಿದ್ದಾರೆ.
ಆರೋಪಿ ಪ್ರವೀಣನ ಮದುವೆ ಇನ್ನೆರಡು ದಿನದಲ್ಲಿ ವಿಜಯಪುರದಲ್ಲಿ ನಡೆಯುವುದಿತ್ತು ಎಂಬುದು ವಿಚಾರಣೆಯಿಂದ ಗೊತ್ತಾಗಿದೆ.
- ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
- ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
- ಜೂ. 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್
- ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್
- ರೋಹಿಣಿಗೆ ಮತ್ತೆ ಸಂಕಷ್ಟ – ಮೈಸೂರು ಡಿಸಿ ಆಗಿದ್ದ ವೇಳೆ ಮಾಡಿದ್ದ ಅಕ್ರಮ ಆರೋಪ ತನಿಖೆಗೆ ಆದೇಶ
More Stories
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
ಚಿನ್ನ ಅಡ ಇಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಟಿ ಚೇತನಾ – ವೈದ್ಯರು ಸಿಬ್ಬಂದಿ ನಾಪತ್ತೆ
ಕಾಶ್ಮೀರಿ ಹಿಂದೂಗಳ ಹಂತಕ ಯಾಸಿನ್ ಮಲಿಕ್ ಅಪರಾಧ ಸಾಬೀತು; ಮೇ.25ರಂದು ಶಿಕ್ಷೆ ಪ್ರಕಟ