ಹೊತ್ತಿ ಉರಿದ ಬಿಎಂಟಿಸಿ ಬಸ್ : ತಪ್ಪಿದ ಭಾರೀ ಅನಾಹುತ

Team Newsnap
0 Min Read

ಬೆಂಗಳೂರಿನ ಮಕ್ಕಳ ಕೂಟ ಸರ್ಕಲ್ ಬಳಿ (KA57F 1592 ) ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ.

ಬೆಂಕಿ ಹೊತ್ತಿಕೊಳ್ತಿದ್ದಂತೆ ಚಾಲಕ ಬಸ್​ ನಿಲ್ಲಿಸಿದ್ದಾನೆ, ಪರಿಣಾಮ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ವರದಿಯಾಗಿದೆ.

ಬಸ್ ಕೆ.ಆರ್​.ಮಾರುಕಟ್ಟೆಯಿಂದ ವಿವಿಪುರಂ ಮಾರ್ಗವಾಗಿ ಮಕ್ಕಳಕೂಟ ಬಸ್ ನಿಲ್ದಾಣಕ್ಕೆ ಬರುತ್ತಿತ್ತು ಸುಮಾರು 40 ಪ್ರಯಾಣಿಕರು ಇದ್ದರು ಎನ್ನಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a comment