ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಕೂಡಿಹಾಕಿ ಸಾಕಿದ ಆರೋಪದಲ್ಲಿ ದೂರು ದಾಖಲಾಗಿದೆ.
ಶುಕ್ರವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿ, ಮಂಗೋಲಿಯಾ ಮೂಲದ ವಲಸೆ ಹಕ್ಕಿಗಳಾದ 4 ಪಟ್ಟೆ ತಲೆ ಹೆಬ್ಬಾತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ಕು ವಿದೇಶಿ ಹಕ್ಕಿಗಳನ್ನು ರಕ್ಷಣೆ ಮಾಡಲಾಗಿದೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನು ಓದಿ – ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ
ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿರುವ ಅರಣ್ಯಾಧಿಕಾರಿಗಳು ಇವು ವಿರಳವಾದ ಪಕ್ಷಿಗಳಾಗಿದ್ದು, ಖಜಕಿಸ್ತಾನ, ಮಂಗೋಲಿಯಾ ಭಾಗದಲ್ಲಿ ಕಂಡುಬರುತ್ತವೆ. ಆ ಪ್ರದೇಶಗಳಲ್ಲಿ ಶೀತದ ವಾತಾವರಣ ಹೆಚ್ಚಿದಾಗ ರಕ್ಷಣೆಗಾಗಿ ಹಿಮಾಲಯ ದಾಟಿ ದಕ್ಷಿಣ ರಾಜ್ಯಗಳಿಗೆ ಬರುತ್ತವೆ. ಇವುಗಳನ್ನು ಸೆರೆಹಿಡಿದು ಸಾಕುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧವಾಗಿದೆ, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು