ರಾಷ್ಟ್ರೀಯ

ಸಿಎಂ ಮನೆ ಬಳಿ ಹನುಮಾನ್ ಚಾಲೀಸಾ ಪಠಣ- ಸಂಸದೆ ನವನೀತ್ , ಪತಿ ರವಿ ವಿರುದ್ದ ದೇಶದ್ರೋಹದ ಕೇಸ್

ಶಿವಸೇನೆ ಸರ್ಕಾರದಿಂದ ಸಂಸದೆ ವಿರುದ್ಧ ದೇಶದ್ರೋಹ ಕೇಸ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲಿಸಾ ಪಠಣ ಮಾಡ್ತೀವಿ ಎಂದಿದ್ದ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ಶಾಸಕ ರವಿ ರಾಣ ವಿರುದ್ಧ ಶಿವಸೇನೆ ಸರ್ಕಾರ ದೇಶದ್ರೋಹ ದೂರು ದಾಖಲಿಸಿದೆ.

ಮುಂಬೈ ನಲ್ಲಿ ಭಾನುವಾರ ಮಾಜಿ ನಟಿ, ಲೋಕಸಭೆ ಸಂಸದೆ ನವನೀತ್ ರಾಣಾ ಮತ್ತು ಅವರ ಶಾಸಕ ಪತಿ ರವಿ ರಾಣಾ ಅವರಿಗೆ ಬಾಂದ್ರಾ ನ್ಯಾಯಾಲಯದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇತ್ತ ಸರ್ಕಾರ ಮತ್ತು ಮುಖ್ಯಮಂತ್ರಿಯ ವಿರುದ್ಧ ದ್ವೇಷ ಹರಡುವ ಕಾರಣಕ್ಕಾಗಿ ಅವರ ವಿರುದ್ಧ ಸೆಕ್ಷನ್ 124 ಎ ಅನ್ವಯ ದೇಶದ್ರೋಹ ಪ್ರಕರಣವನ್ನು ದಾಖಲಿಸಿದೆ.

ಸಿಎಂ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಣ !

ಮಹಾರಾಷ್ಟ್ರದ ಹನುಮಾನ್ ಚಾಲೀಸಾ ಪಠಣ ವಿವಾದದ ಕುರಿತಂತೆ ಎಂಪಿ ನವನೀತ್​ ಕೌರ್​​ ಮೇಲೆ ಮತ್ತೊಂದು ಎಫ್​ಐಆರ್ ದಾಖಲಾಗಿದೆ. ಎರಡು ಸಮುದಾಯಗಳ ನಡುವೆ ದ್ವೇಷ ಹರಡಿಸುವ ಆರೋಪದ ಅಡಿ ಈಗಾಗಲೇ ನವನೀತ್ ಕೌರ್ ಹಾಗೂ ಅವರ ಪತಿ ರವಿ ರಾಣ ಅವರನ್ನು ಬಂಧಿಸಲಾಗಿತ್ತು

ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ ಎಂದು ಎರಡು ವರ್ಗಗಳ ನಡುವೆ ಧ್ವೇಷ ಉಂಟು ಮಾಡಲು ಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಾಂಬೆ ಪೊಲೀಸ್ ಕಾಯ್ದೆಯ ಸೆಕ್ಷನ್ 153 ಎ, 35, 37, 135 ರ ಅಡಿಯಲ್ಲಿ ಹಾಗೂ ಐಪಿಸಿ ಸೆಕ್ಷನ್ 353 ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಈ ನಡುವೆ ಇಂದು ಕೋರ್ಟ್​ಗೆ ಇಬ್ಬರನ್ನು ಪೊಲೀಸರು ಹಾಜರು ಪಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಪೀಠ, ಜಾಮೀನು ಅರ್ಜಿಯನ್ನು ಏಪ್ರಿಲ್ 29 ರಂದು ವಿಚಾರಣೆ ಮಾಡುವುದಾಗಿ ತಿಳಿಸಿ 27ರ ಒಳಗೆ ಪೊಲೀಸರಿಗೆ ಜಾಮೀನು ಅರ್ಜಿಯನ್ನು ತಿರಸ್ಕರಿಸಲು ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿತ್ತು.

ಆ ಬಳಿಕ ದಂಪತಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ವಿಚಾರಣೆ ಮುಂದೂಡಿತ್ತು. ಸದ್ಯ ಅಮರಾವತಿ ಸಂಸದೆಯನ್ನು ಬೈಕುಲ್ಲಾ ಜೈಲು ಹಾಗೂ ಶಾಸಕರನ್ನು ಆರ್ಥರ್ ರೋಡ್ ಜೈಲಿಗೆ ಕಳುಹಿಸಲಾಗುತ್ತದೆ.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024