ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದು 2 ವರ್ಷದ ಮಗುವೂ ಸೇರಿ ಐವರು ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ಜರುಗಿದೆ.
ಹೈದ್ರಾಬಾದ್ನಿಂದ ಕಲಬುರಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದ ಕುಟುಂಬ ಬೀದರ್ ತಾಲೂಕಿನ ಭಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತಕ್ಕೆ ಬಲಿ ಆಗಿದೆ.
ಹೈದರಾಬಾದ್ನಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಬೇಗಂ ಪೇಟದ ನಿವಾಸಿ ಗಿರಿಧರ್ (45) ಪತ್ನಿ ಅನಿತಾ (36) ಮಯಾಂಕ್ (2 ) ಅನಿತಾ ತಂಗಿ ಮಗಳು ಪ್ರಿಯಾಂಕಾ (15) ಹಾಗೂ ಕಾರು ಚಾಲಕ ದಿನೇಶ್ (35) ಮೃತಪಟ್ಟವರು.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ 2 ವರ್ಷದ ಮಯಾಂಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ಗಿರಿಧರ ಪುತ್ರ 12 ವರ್ಷದ ಹರ್ಷವರ್ಧನಗೆ ಯಾವುದೇ ಗಾಯಗಳಾಗದೇ ಪಾರಾಗಿದ್ದಾನೆ.
ಇನ್ನು ಘಟನೆಯಲ್ಲಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment