ಬೆಂಗಳೂರಿನಲ್ಲಿ ಬೀಗ ಹಾಕಿದ್ದ ಮನೆ ದೋಚುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ, ನಾಗರಾಜ್ ಮತ್ತು ರಮ್ಯ ಬಂಧಿತ ದಂಪತಿ. ಇವರಿಬ್ಬರೂ ಕಳ್ಳತನವನ್ನೇ ವೃತ್ತಿ ಮಾಡ್ಕೊಂಡಿದ್ದರು. ಬೀಗ ಹಾಕಿದ್ದ ಮನೆಗಳು ಇವರ ಟಾರ್ಗೆಟ್ ಆಗಿತ್ತು.
ಮೈಸೂರಿನ ರಮ್ಯ ಮತ್ತು ಬೆಂಗಳೂರಿನ ಉತ್ತರಹಳ್ಳಿ ಮೂಲದ ನಾಗರಾಜ್ ನಡುವೆ ಪರಿಚಯವಾಗಿತ್ತು. ಬಳಿಕ ಇಬ್ಬರೂ ಕೂಡ ಇನ್ಸ್ಟಾಗ್ರಾಮ್ ಮೂಲಕ ಚಾಟ್ ಮಾಡಿಕೊಂಡು ಮತ್ತಷ್ಟು ಸ್ನೇಹ ಬೆಳೆಸಿಕೊಂಡಿದ್ದರು.
ಈ ಸ್ನೇಹ ಬಳಿಕ ಪ್ರೀತಿಗೆ ತಿರುಗಿತ್ತು. ನಂತರ ಮದುವೆಯಾಗಿದ್ದರು. ಮದುವೆಯ ಬಳಿಕ ನಾಗರಾಜ್ ಮತ್ತು ರಮ್ಯ ಸೇರಿಕೊಂಡು ಕಳ್ಳತನ ಮಾಡಲು ಶುರು ಮಾಡಿದ್ದರು. ಈಗಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು – ಕುಟುಕಿದ ಡಾ. H C ಮಹದೇವ
ಇಬ್ಬರು ಪ್ರಮುಖ ರಸ್ತೆಗಳಲ್ಲಿ ತಿರುಗಿ ವಸತಿ ಸ್ಥಳಗಳಲ್ಲಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದರು ನಾಗರಾಜ್ ಕಳ್ಳತನ ಮಾಡಲು ಮನೆ ಒಳಗೆ ಹೋಗಿದ್ರೆ ರಮ್ಯ ಬಾಗಿಲಲ್ಲಿ ನಿಂತು ಕಾಯುತಿದ್ಲು. ಯಾರಾದ್ರು ಬಂದ್ರೆ ನಾಗರಾಜ್ಗೆ ಸಿಗ್ನಲ್ ಕೊಟ್ಟು ನಂತ್ರ ಸ್ಥಳದಿಂದ ಎಸ್ಕೇಪ್ ಆಗ್ತಿದ್ರು.
ಕದ್ದ ಚಿನ್ನವನ್ನು ರಮ್ಯ ಅಡಮಾನ ಇಟ್ಟು ಹಣ ಪಡೆಯುತ್ತಿದ್ದರು. ಹೀಗೆ ಜೀವನ ನಡೆಸುತ್ತಿದ್ದ ಜೋಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ