ಸಂಪುಟ ಸರ್ಜರಿ ಹೊತ್ತಲ್ಲೇ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ಹೋಗಿದ್ದಾರೆ
ಹೈಕಮಾಂಡ್ ನಾಯಕರಿಂದ ಬುಲಾವ್ ಬಂದ ಬೆನ್ನಲ್ಲೆ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ.
ನಿನ್ನೆ ಹೈಕಮಾಂಡ್ ನಾಯಕರು ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದರು.
ಅದರಂತೆ ಬಿ.ವೈ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಸಂಪುಟ ಪುನಾರಚನೆ ಕಸರತ್ತಿನ ನಡುವೆ ವಿಜಯೇಂದ್ರ ದೆಹಲಿಯಾತ್ರೆ ಮಾಡಿರುವದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಯಾತ್ರೆ ಮುನ್ನವೇ ಸಚಿವರ ದಂಡು ದೆಹಲಿಗೆ ತೆರಳಿದೆ. ರಾಜ್ಯ ಸಚಿವ ಸಂಪುಟದ 10ಕ್ಕೂ ಹೆಚ್ಚು ಸಚಿವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಇಂಧನ ಸಚಿವ ಸುನಿಲ್ ಕುಮಾರ್, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಕಾನೂನು & ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಪಶುಸಂಗೋಪನಾ ಸಚಿವ ಪ್ರಭು ಚೌಹ್ಹಾಣ್, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ದೆಹಲಿಗೆ ಹೋಗಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ