ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿ ರಾಮನಗರ ಜಿಲ್ಲೆಯಲ್ಲಿ ನೇಣು ಬಿಗಿದುಕೊಂಡು
ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚನ್ನಪಟ್ಟಣದ ಎಲೆಕೇರಿಯ ವೆಂಕಟೇಶ್ (26) ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ.
ಪವರ್ಸ್ಟಾರ್ ಅಭಿಮಾನಿಯಾಗಿದ್ದ ವೆಂಕಟೇಶ್ ಪುನೀತ್ ಅಕಾಲಿಕ ನಿಧನದಿಂದ ನೊಂದಿದ್ದು ಕಳೆದ ಮೂರು ದಿನಗಳಿಂದ ಊಟ ಬಿಟ್ಟಿದ್ದನಂತೆ.
ಈ ಅಭಿಮಾನಿ ಅಪ್ಪು ಸಮಾಧಿ ನೋಡಲು ಹಠ ಹಿಡಿದಿದ್ದನಂತೆ. ಅಪ್ಪು ಸಮಾಧಿ ನೋಡಲೇಬೇಕೆಂಬ ಆಶಯ ಹೊಂದಿದ್ದನಂತೆ. ಆದರೆ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.