Main News

ಎಂಟು ಇಲಾಖೆಯಲ್ಲಿ ಪೂರ್ಣವಾಗಿ ಬಳಕೆಯಾಗದ ಅನುದಾನ: ಸಿಎಂ

ಬಜೆಟ್ ಹಂಚಿಕೆಯ ಅನುಸಾರ ಬಿಡುಗಡೆಯಾದ ಅನುದಾನವನ್ನು ಎಂಟು ಇಲಾಖೆಗಳು ಇನ್ನೂ ಪೂರ್ಣಪ್ರಮಾಣದಲ್ಲಿ ಬಳಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಕೆಲವು ತಾಂತ್ರಿಕ ಕಾರಣಗಳಿಂದಾಗಿ ಇದರಲ್ಲಿ ವಿಳಂಬವಾಗಿದೆ. ಇರುವ ಸಮಸ್ಯೆ ಬಗೆಹರಿಸಿ ಆದಷ್ಟು ಬೇಗ ಅನುದಾನ ಬಳಕೆಗೆ ಕ್ರಮಕ್ಕೆ ಮುಂದಾಗಬೇಕೆಂದು ಸೂಚಿಸಲಾಗಿದೆ ಎಂದರು.


ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆಡಿಪಿ)ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಮಂಗಳವಾರ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ನಂತರ ವರದಿಗಾರರೊಂದಿಗೆ ಮಾತನಾಡಿದರು.


ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ನ್ಯಾಯಾಲಯಗಳಲ್ಲಿರುವ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.


ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ನೇತೃತ್ವದಲ್ಲಿ ಸಲಹಾ ಸಮಿತಿ ರಚಿಸಲಾಗುವುದು. ಸುಧಾರಣಾ ಕ್ರಮಗಳನ್ನು ಬರುವ ನವೆಂಬರ್ 1 ರಿಂದ ಜಾರಿಗೆ ತರಲಾಗುವುದು ಎಂದು ವಿವರಿಸಿದರು.


ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿಕತೆ ಸಮಸ್ಯೆ ಹೆಚ್ಚು ಇರುವುದು ಗೊತ್ತಾಗಿದೆ. ಇದನ್ನು ನಿವಾರಿಸಲು ವಿಶೇಷ ಯೋಜನೆ ರೂಪಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು.

Team Newsnap
Leave a Comment
Share
Published by
Team Newsnap

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024