Main News

ಇಂದಿನಿಂದ ಅದ್ದೂರಿ ಮೈಸೂರು ದಸರಾ : ರಾಷ್ಟ್ರಪತಿಗಳಿಂದ ಉದ್ಘಾಟನೆ -ಎಲ್ಲೆಲ್ಲಿ ಏನು ಕಾರ್ಯಕ್ರಮ ?

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆ ಆಗಿದೆ. ದಸರಾ ಅಧೀಕೃತ ಉದ್ಘಾಟನೆಗೆ ಕ್ಷಣ ಗಣನೆ ಆರಂಭವಾಗಿದೆ.

ಇಂದಿನಿಂದ 9 ದಿನಗಳ ಕಾಲ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ವೈಭವ ಆರಂಭವಾಗಲಿದೆ.ವೈಭಪೂರಿತ ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪತಿ ಮುರ್ಮ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 10ಕ್ಕೆ ರಾಷ್ಟ್ರಪತಿ ಮುರ್ಮು, ತಾಯಿ ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪರ್ಚಾನೆ ಸಲ್ಲಿಸಿ, ದೀಪ ಬೆಳಗುವ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯಪಾಲರು, ಸಿಎಂ, ಕೇಂದ್ರ ಸಚಿವರು ಜೊತೆಯಲ್ಲಿ ಇರಲಿದ್ದಾರೆ.

ಅಂಬಾವಿಲಾಸ ಅರಮನೆಯಲ್ಲಿ ಇಂದಿನಿಂದ ಖಾಸಗಿ ದರ್ಬಾರ್ ನಡೆಯಲಿದೆ, ಗತಕಾಲದ ವೈಭವ ಮರುಕಳಿಸಲಿದೆ. ದಸರಾ ಕಾರ್ಯಕ್ರಮದ ಆಕರ್ಷಣೆಯ ಕೇಂದ್ರವಾಗಿರುವ ಫಲಪುಷ್ಪ ಪ್ರದರ್ಶನ ಉದ್ಘಾಟನೆಗೆ ಭರದ ಸಿದ್ಧತೆ ಪೂರ್ಣಗೊಂಡಿದೆ.ಇದನ್ನು ಓದಿ : ದಸರಾ ಹಬ್ಬದ ಆಚರಣೆಯ ಮಹತ್ವ

ಅಕ್ಟೋಬರ್ 5ರವರೆಗೆ ನಗರದ ಕುಪ್ಪಣ್ಣ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನದ ಏರ್ಪಡಿಸಲಾಗಿದೆ.
ದಸರಾ ತಯಾರಿಯನ್ನು ಸಿಎಂ ಬೊಮ್ಮಾಯಿ ವೀಕ್ಷಿಸಿ ರಾತ್ರಿ ಸಿಟಿ ರೌಂಡ್ಸ್ ಮಾಡುವ ಮೂಲಕ ವಿದ್ಯುತ್ ದೀಪಾಲಂಕಾರವನ್ನು ನೋಡಿದರು.

ಇಂದಿನ ಕಾರ್ಯಕ್ರಮಗಳು:

  • ಬೆಳಗ್ಗೆ 9:45 ರಿಂದ 10.05ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆ
  • ಮಧ್ಯಾಹ್ನ 12:00 – ಕೈಗಾರಿಕಾ ದಸರಾ ಉದ್ಘಾಟಿಸಲಿರುವ ಸಚಿವ ನಿರಾಣಿ ಸ್ಥಳ: ವಿಜ್ಞಾನ ಭವನ
  • ಮಧ್ಯಾಹ್ನ 12:30 – ಶಿವರಾಜ್‍ಕುಮಾರ್ ಅವರಿಂದ ಚಲನಚಿತ್ರೋತ್ಸವ ಉದ್ಘಾಟನೆ ಸ್ಥಳ: ಕಲಾಮಂದಿರ
  • ಮಧ್ಯಾಹ್ನ 12.30 – ಫಲಪುಷ್ಪ ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಮುನಿರತ್ನ ಸ್ಥಳ: ಕುಪ್ಪಣ್ಣ ಪಾರ್ಕ್
  • ಮಧ್ಯಾಹ್ನ 1.00 – ಸಚಿವ ಎಸ್‍ಟಿಎಸ್ ಅವರಿಂದ ಆಹಾರ ಮೇಳ ಉದ್ಘಾಟನೆ ಸ್ಥಳ: ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ
  • ಮಧ್ಯಾಹ್ನ 3:30 – ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ, ಸ್ಥಳ: ದೇವರಾಜ ಅರಸು ಕ್ರೀಡಾಂಗಣ
  • ಸಂಜೆ 4- ವಸ್ತು ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಆನಂದ್ ಸಿಂಗ್
  • ಸಂಜೆ 5 – ಯೋಗ ದಸರಾ, ನೃತ್ಯರೂಪಕ, ಸ್ಥಳ: ಓವೆಲ್ ಮೈದಾನ
  • ಸಂಜೆ 5:30 – ಅರಮನೆಯಲ್ಲಿ ಸಚಿವ ಎಸ್‍ಟಿ. ಸೋಮಶೇಖರ್ ಅವರಿಂದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಫಲಪುಷ್ಪ ಪ್ರದರ್ಶನ ಉದ್ಘಾಟನೆ
  • ಸಂಜೆ 5:30 – ರಾಜ್ಯಮಟ್ಟದ ಶಿಲ್ಪ ಚಿತ್ರಕಲೆ ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಸುನೀಲ್ ಕುಮಾರ್, ಸ್ಥಳ: ಕಲಾಮಂದಿರ
  • ಸಂಜೆ 6 – ಅರಮನೆ ವೇದಿಕೆ ಕಾರ್ಯಕ್ರಮ, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ, ಉದ್ಘಾಟನೆ ಸಿಎಂ ಬೊಮ್ಮಾಯಿ
  • ಸಂಜೆ 6:30 – ವಿದ್ಯುತ್ ದೀಪಾಲಂಕಾರ ಉದ್ಘಾಟಿಸಲಿರುವ ಸಚಿವ ಸುನೀಲ್ ಕುಮಾರ್, ಸ್ಥಳ: ಸಯ್ಯಾಜಿ ರಾವ್ ರಸ್ತೆ
Team Newsnap
Leave a Comment
Share
Published by
Team Newsnap

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024