ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.
ಗುರುಲಿಂಗ ಸ್ವಾಮಿ ಅವರ ಗೌರವಾರ್ಥ ಕಂದಾಯ ಭವನದಲ್ಲಿನ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಪತ್ರಕರ್ತರು, ಅವರ ಸಾವಿಗೆ ಮರುಗಿದರು.
ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು. ಎರಡು ನಿಮಿಷ ಮೌನಾಚರಣೆ ಮಾಡಿ
ಸಂತಾಪ ಸೂಚಿಸಲಾಯಿತು.ಇದನ್ನು ಓದಿ –ರಾಜ್ಯದ ಜಿಪಂ – ತಾಪಂ ಗಳ ಜನಸಂಖ್ಯೆ , ಸ್ಥಾನ ನಿಗದಿ : ಸರ್ಕಾರದ ಆದೇಶ
ಎರಡು ದಶಕಗಳಿಗೂ ಹೆಚ್ಚು ಕಾಲ ಸುದ್ದಿ ಮನೆಯಲ್ಲಿ ಕೆಲಸ ಮಾಡಿದ ಗುರುಲಿಂಗ ಸ್ವಾಮಿ ಅವರ ಕುಟುಂಬಕ್ಕೆ ಸರ್ಕಾರ ನೆರವು ನೀಡಬೇಕು. ಆ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಬೇಕು ಎಂದು ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಒತ್ತಾಯಿಸಿತು.
ರಾಜ್ಯ ಸಂಘದ ಉಪಾಧ್ಯಕ್ಷ ಭವಾನಿ ಸಿಂಗ್ ಠಾಕೂರ್,ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರಾದ ಹನುಮಂತ ಭೈರಮಡಗಿ, ವಿಜಯಪುರದ ಮೋಹನ ಪಿ. ಕುಲಕರ್ಣಿ, ಟಿವಿ5 ಸಂಪಾದಕ ಸತೀಶ್ ಎಂ., ದಶರಥ, ಸಾಹಿತಿ ಆರ್.ಜಿ.ಹಳ್ಳಿ ನಾಗರಾಜ್, ಉದಯವಾಣಿ ಮುಖ್ಯ ವರದಿಗಾರ ಲಕ್ಷೀನಾರಾಯಣ್, ಎನ್. ಶಿವಾನಂದ, ಶಶಿಕಲಾ ಅವರು ಮಾತನಾಡಿ, ಗುರುಲಿಂಗಸ್ವಾಮಿ ಅವರ ಒಡನಾಟ ಹಾಗು ಅವರ ಆದರ್ಶಗಳ ಗುಣಗಾನ ಮಾಡಿದರು.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಗುರುಲಿಂಗಸ್ವಾಮಿ ಹೊಳಿಮಠ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದಾಗ ಪತ್ರಕರ್ತರಿಗೆ ಆರ್ಥಿಕ ನೆರವಿನ ಸಂದರ್ಭ ಬಂದಾಗಲೆಲ್ಲಾ ಹೆಚ್ಚಿನ ಕಾಳಜಿ ವಹಿಸಿ ಮುಖ್ಯ ಮಂತ್ರಿಗಳಿಂದ ನೆರವು ಕೊಡಿಸುವಲ್ಲಿ ಅವರ ಶ್ರಮ ಅಪಾರವಾಗಿತ್ತೆಂಬುದನ್ನು ಸ್ಮರಿಸಿದರು.
ಎರಡೂ ದಶಕಗಳಿಗೂ ಹೆಚ್ಚು ಕಾಲ ಸುದ್ದಿ ಮನೆಯಲ್ಲಿ ಸುದ್ದಿಮೂಲ, ಕನ್ನಡ ಪ್ರಭ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಯಲ್ಲಿ ಮತ್ತು ಈ ಟಿವಿ, ಟಿವಿ5 ವಾಹಿನಿಯಲ್ಲಿ ಪತ್ರಕರ್ತರಾಗಿ, ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿಯೂ ಕ್ರಿಯಾಶೀಲವಾಗಿ ಕೆಲಸ ಮಾಡಿದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಕಾರ್ಯ ವೈಖರಿ ಮಾದರಿಯಾಗಿತ್ತು ಎಂದು ಹೇಳಿದರು.
ಸರ್ಕಾರ ಅವರ ಕುಟುಂಬಕ್ಕೆ ನೆರವಾಗಬೇಕು. ಸಿಎಂ ಈ ಬಗ್ಗೆ ಗಮನಹರಿಸಿ ತ್ವರಿತವಾಗಿ ಆರ್ಥಿಕ ಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.ಹುಡುಗಿ ವಿಚಾರಕ್ಕೆ ಪೋಲಿಸ್ ಕಮಿಷನರ್ ಕಚೇರಿ ಮುಂದೆಯೇ ಕೈಕೈ ಮಿಲಾಯಿಸಿದ ವಿದ್ಯಾರ್ಥಿಗಳು
ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಮಾತನಾಡಿ, ಗುರುಲಿಂಗ ಸ್ವಾಮಿ ಯವರ ನಿಧನದ ಸುದ್ದಿ ತಿಳಿದು ಅಂತಿಮ ದರ್ಶನ ಪಡೆಯಲು ಅಂದು ಸೇರಿದ ಜನಸಾಗರವನ್ನು ನೋಡಿದರೆ ಅವರು ಎಷ್ಟು ಜನಮುಖಿಯಾಗಿದ್ದರು ಎನ್ನುವುದಕ್ಕೆ ಸಾಕ್ಷಿ ಎಂದರು.
ಇದೇ ಸಂದರ್ಭದಲ್ಲಿ ಅವರ ಪರೋಪಕಾರದ ಹೃದಯ ವಂತಿಕೆಯನ್ನು ಸ್ಮರಿಸಿದರು.
ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಕೆ.ಕೆ.ಕುಲಕರ್ಣಿ, ವಾಸುದೇವ ಹೊಳ್ಳ, ದೇವರಾಜ್, ಸೋಮಶೇಖರ್ ಗಾಂಧಿ, ಸಂಘದ ನಗರ ಘಟಕದ ಅಧ್ಯಕ್ಷ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಖಜಾಂಚಿ ಶಿವರಾಜ್, ಜಕ್ರಿಯಾ, ರಾಜ್ಯ ಪತ್ರಿಕಾ ವಿತರಕರ ರಾಜ್ಯಾಧ್ಯಕ್ಷ ಶಂಭುಲಿಂಗ ಹಾಜರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು