ಪ್ರೀತಿಸಿ ಮದ್ವೆಯಾಗಿದ್ದ ಜೋಡಿಗಳು. ಮದ್ವೆಗೆ ಸಾಕ್ಷಿಯಾಗಿ ವಿವಾಹ ನೋಂದಣಿ ಕೂಡ ಆಗಿದೆ. ಸಂಸಾರ ಆರಂಭಿಸುವ ಹೊತ್ತಿಗೆ ಯುವತಿಯ ಪೋಷಕರ ದೂರಿನ ಮೇರೆಗೆ ಅಪ್ರಾಪ್ತೆಯೆಂಬ ಕಾರಣ ಹೇಳಿ ಆಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳಿಸಿ ಘಟನೆ ಮಂಡ್ಯ ದಲ್ಲಿ ನಡೆದಿದೆ.
ಮದುವೆಯಾದ ಯುವಕ ತನ್ನ ಪತ್ನಿಗಾಗಿ ಕಣ್ಣೀರು ಹಾಕುತ್ತಿದ್ದಾನೆ. ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದ ಲಿಂಗೇಶ್ , ಅದೇ ಗ್ರಾಮದ ಋತುಶ್ರೀ ಎಂಬ ಯುವತಿಯನ್ನು 2 ವರ್ಷದಿಂದ ಪ್ರೀತಿಸುತ್ತಿದ್ದನು.
ಹುಡುಗಿಗೆ 18 ವರ್ಷ ತುಂಬಿದ ಮೇಲೆ ಕಳೆದ ಆಗಸ್ಟ್ ತಿಂಗಳು ಮನೆ ಬಿಟ್ಟು ಓಡಿ ಹೋಗಿದ್ದರು. ಜೊತೆಗೆ ತಮ್ಮ ವಿವಾಹ ವನ್ನು ಕೂಡ ನೊಂದಣಾಧಿಕಾರಿ ಕಚೇರಿಯಲ್ಲಿವಿವಾಹ ನೋಂದಣಿ ಮಾಡಿಸಿಕೊಂಡಿದ್ದರು. ಸಂಸಾರ ಆರಂಭಿಸಬೇಕು ಎನ್ನುವಷ್ಟರಲ್ಲಿ ಹುಡುಗಿಯ ತಾಯಿ, ಆಕೆ ಅಪ್ರಾಪ್ತೆ, ಆಕೆಗಿನ್ನು18 ವರ್ಷ ತುಂಬಿಲ್ಲ ಎಂದು ಕೆರಗೋಡು ಪೊಲೀಸರಿಗೆ ದೂರು ನೀಡಿದಳು. ಪೋಲಿಸರು ಇಬ್ಬರನ್ನು ವಶಕ್ಕೆ ಪಡೆದ ವಿಚಾರಣೆ ನಡೆಸಿದರು.
ಹುಡುಗಿಯ ಹೇಳಿಕೆ ಮತ್ತು ದಾಖಲೆ ಪರಿಶೀಲನೆ ನಡೆಸಿದಾಗ ಹುಡುಗಿ ತಾನೇ ಸ್ವಇಚ್ಛೆಯಿಂದ ಮದುವೆ ಯಾಗಿರುವುದಾಗಿ ತಿಳಿಸಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದ್ರೆ ಋತುಶ್ರೀ ತಾಯಿ ಮಾತ್ರ ತನ್ನ ಪ್ರಭಾವ ಬಳಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನಕಲಿ ಜನ್ಮ ಪ್ರಮಾಣ ಪತ್ರ ಸಲ್ಲಿಸಿದ್ದಾಳೆ. ಈ ದಾಖಲೆ ಪಡೆದ ಅಧಿಕಾರಿಗಳು ಇದೀಗ ಆ ಬಾಲಕಿಯನ್ನು ಬಾಲಮಂದಿರಕ್ಕೆ ಕಳುಹಿಸಿದ್ದಾರೆ.
18 ವರ್ಷ ತುಂಬಿದ್ದಕ್ಕೆ ದಾಖಲೆಗಳನ್ನು ಒದಗಿಸಿದರೂ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಹಾಗೂ ತಾನು ಪ್ರೀತಿಸಿ ಮದುವೆಯಾದ ಹುಡುಗಿಯನ್ನು ತನಗೆ ಬಿಟ್ಟು ಕೊಡಲು ಪೋಷಕರೇ ಅಡ್ಡಗಾಲು ಹಾಕಿದ್ದಾರೆ ಎನ್ನುವುದು ಋತುಶ್ರೀ ಪತಿ ಲಿಂಗಪ್ಪ ದೂರು.
ಮಕ್ಕಳ ಸಮಿತಿಯ ಹೊಣೆ ಎಷ್ಟು ?
ಮಕ್ಕಳ ಕಲ್ಯಾಣ ಸಮಿತಿಯವರು 18 ವರ್ಷ ತುಂಬಿದ್ದರು ಈ ಯುವತಿಯನ್ನು ಬಿಡುಗಡೆ ಮಾಡದೆ ಪೋಷಕರ ಒತ್ತಡಕ್ಕೆ ಮಣಿದು ಅಧಿಕಾರಿಗಳಿಗೂ ಸಬೂಬು ಹೇಳಿಕೊಂಡು ಯುವತಿ ಬಾಲಮಂದಿರದಲ್ಲಿರುವಂತೆ ಆದೇಶಿಸಿದ ಹಿನ್ನಲೆ ತಮಗೆ ಅರ್ಥವಾಗುತ್ತಿಲ್ಲವೆಂದು ಆಕೆಯ ಪತಿ ಲಿಂಗಪ್ಪ ಮಾಧ್ಯಮದ ಎದುರು ಹೇಳಿದ್ದಾರೆ
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment