ಬಡ, ಅನಕ್ಷರಸ್ಥ ವ್ಯಕ್ತಿಯೊಬ್ಬರು ಕಷ್ಟಪಟ್ಟು ಸಂಪಾದಿಸಿದ್ದ 11 ಸಾವಿರ ಪುಸ್ತಕಗಳ ಗ್ರಂಥಾಲಯವನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಸುಟ್ಟು ಹಾಕಿರೋ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ರಾಜೀವ್ ನಗರದ ಸೈಯದ್ ಇಸಾಕ್ ಈ ಗ್ರಂಥಾಲಯ ಸ್ಥಾಪಿಸಿದ್ದರು.
ಕೂಲಿ ಕೆಲಸ, ಪೌರಕಾರ್ಮಿಕ ಕೆಲಸ ಮಾಡಿಕೊಂಡೆ ಮಕ್ಕಳಿಗೆ ಬಡಾವಣೆಯ ಮಕ್ಕಳಿಗೆ ಜ್ಞಾನರ್ಜನೆ ಮೂಡಿಸುವ ಸಲುವಾಗಿ 2011ರಲ್ಲಿ ಮೈಸೂರಿನ ರಾಜೀವ್ನಗರದಲ್ಲಿ ಗ್ರಂಥಾಲಯ ಸ್ಥಾಪಿಸಿದ್ದರು.
ತನ್ನ ಉಳಿತಾಯದ ಹಣದಲ್ಲಿ ಗುಡಿಸಲಿನಲ್ಲಿ ನಿರ್ಮಿಸಿದ್ದ ಸಯ್ಯದ್ ಇಸಾಕ್ ಗ್ರಂಥಾಲಯದಲ್ಲಿ ಭಗವದ್ಗೀತೆ, ಕನ್ನಡದಲ್ಲಿ ಕುರಾನ್, ಕನ್ನಡದಲ್ಲಿ ಬೈಬಲ್, ಸಂವಿಧಾನ ಪುಸ್ತಕಗಳು ಇದರಲ್ಲಿ ಇದ್ದವು.
ಚರಂಡಿ ಸ್ವಚ್ಚತೆ, ಮ್ಯಾನ್ಹೋಲ್ ಶುದ್ಧಿಕಾರ್ಯ ಮಾಡುವ ಸಯ್ಯದ್ ಇಸಾಕ್ ಅವರು ಬಡತನ ಇದ್ದು ಅನಕ್ಷರಸ್ಥರಾಗಿದ್ದರು ಕೂಡ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಈ ಗ್ರಂಥಾಲಯ ಸ್ಥಾಪಿಸಿದ್ದರು. ಈಗ ಈ ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಿಂದ ಸಯ್ಯದ್ ಇಸಾಕ್ ತೀವ್ರ ಬೇಸರಕ್ಕೀಡಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ